ಶಿಕಾರಿಪುರ ಅಂಜನಾಪುರ ಜಲಾಶಯ ಭರ್ತಿ : ಯಡಿಯೂರಪ್ಪ ಪುತ್ರರಿಂದ ಬಾಗಿನ ಅರ್ಪಣೆ

filling of shikaripura anjanapura reservoir: yeddyurappa's sons offer bagin ಶಿಕಾರಿಪುರ ಅಂಜನಾಪುರ ಡ್ಯಾಂ ಭರ್ತಿ : ಯಡಿಯೂರಪ್ಪ ಪುತ್ರರಿಂದ ಬಾಗಿನ ಅರ್ಪಣೆ

ಶಿಕಾರಿಪುರ (shikaripura), ಜು. 17: ಶಿಕಾರಿಪುರ ತಾಲೂಕಿನಾದ್ಯಂತ ಮುಂಗಾರು ಮಳೆ (monsoon rain) ಚುರುಕುಗೊಂಡಿದೆ. ಈ ನಡುವೆ ತಾಲೂಕಿನ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ, ತಾಲೂಕಿನ ರೈತರ ಜೀವನಾಡಿಯಾದ ಅಂಜನಾಪುರ ಜಲಾಶಯ (anjanapura dam) ಗರಿಷ್ಠ ಮಟ್ಟ ತಲುಪಿದ್ದು, ನೀರು ಹೊರ ಹರಿಯಲಾರಂಭಿಸಿದೆ.

ಅಂಜನಾಪುರ ಡ್ಯಾಂ 23 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ನೀರಾವರಿ (irrigation) ಜೊತೆಗೆ ಶಿಕಾರಿಪುರ (shikaripura) ಹಾಗೂ ಶಿರಾಳಕೊಪ್ಪ (shiralakoppa) ಪಟ್ಟಣಗಳಿಗೆ ಡ್ಯಾಂನಿಂದ (dam) ಕುಡಿಯುವ ನೀರು (drinking water) ಪೂರೈಕೆಯಾಗುತ್ತದೆ. ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರ (farmers) ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಈ ನಡುವೆ ಬುಧವಾರ ಜಲ ಸಂಪನ್ಮೂಲ ಇಲಾಖೆಯಿಂದ (water resource department) ಅಂಜನಾಪುರ ಡ್ಯಾಂಗೆ (anjanapura dam) ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ (mp b y raghavendra) ಹಾಗೂ ಕ್ಷೇತ್ರದ ಶಾಸಕರೂ ಆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (bjp president b y vijayendra) ಅವರು ಜಲಾಶಯಕ್ಕೆ ಪೂಜೆ ಸಲ್ಲಿಸಿ ಕುಟುಂಬ ಸದಸ್ಯರೊಂದಿಗೆ ಬಾಗಿನ ಅರ್ಪಿಸಿದರು.

‘ತುಂಗಾ ಜಲಾಶಯ ವ್ಯಾಪ್ತಿ ಹಾಗೂ ಶಿಕಾರಿಪುರ ತಾಲೂಕಿನಾದ್ಯಂತ (shikaripur taluk) ಉತ್ತಮ ವರ್ಷಧಾರೆಯಾಗುತ್ತಿದೆ (rainfall). ಇದರಿಂದ ತಾಲೂಕಿನ ಅನ್ನದಾತರ ಜೀವನಾಡಿಯಾದ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ತನ್ನ ವೈಭವವನ್ನು ಮರಳಿ ಪಡೆದಿದೆ. ಇಂದು ಜಲಸಂಪನ್ಮೂಲ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಬಾಗಿನ (bagina) ಸಮರ್ಪಣೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ (mla) ಬಿ.ವೈ. ವಿಜಯೇಂದ್ರ ಅವರೊಂದಿಗೆ ಭಾಗಿಯಾಗಿ ಬಾಗಿನ ಅರ್ಪಿಸಲಾಯಿತು’ ಎಂದು ಲೋಕಸಭಾ ಸದಸ್ಯ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದ (social media) ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →