ತುಂಗಾ ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ : ಶಿವಮೊಗ್ಗ ನಗರದಲ್ಲಿ ಮುಂದುವರಿದ ಪ್ರವಾಹ ಭೀತಿ!

70000 cusecs of water released from tunga dam : flood threat continues in shimoga city! ತುಂಗಾ ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ : ಶಿವಮೊಗ್ಗ ನಗರದಲ್ಲಿ ಮುಂದುವರಿದ ಪ್ರವಾಹ ಭೀತಿ!

ಶಿವಮೊಗ್ಗ (shivamogga), ಜು. 17: ತೀರ್ಥಹಳ್ಳಿ, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾರೀ ವರ್ಷಧಾರೆಯಾಗುತ್ತಿದೆ. ತುಂಗಾ ನದಿ (tunga river) ಉಕ್ಕಿ ಹರಿಯುತ್ತಿದೆ. ಇದರಿಂದ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯದ (tunga dam) ಒಳಹರಿವಿನಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು, ಡ್ಯಾಂನಿಂದ ಹೊರಬಿಡುತ್ತಿರುವ ನೀರಿನ ಪ್ರಮಾಣವೂ ಕೂಡ ಹೆಚ್ಚಾಗಿದೆ.

ಬುಧವಾರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ಒಳಹರಿವು (inflow) 64,247 ಕ್ಯೂಸೆಕ್ ಒಳಹರಿವಿದ್ದು ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ 70,497 ಕ್ಯೂಸೆಕ್ (cusec) ನೀರನ್ನು ಹೊರ ಬಿಡಲಾಗುತ್ತಿದೆ (outflow). ಜಲಾನಯನ ಪ್ರದೇಶ (catchment areas) ವ್ಯಾಪ್ತಿಯಲ್ಲಿ ಧಾರಾಕಾರ ವರ್ಷಧಾರೆಯಾಗುತ್ತಿರುವುದರಿಂದ (heavy rainfall) ಒಳಹರಿವಿನಲ್ಲಿ ನಿರಂತರ ಹೆಚ್ಚಳ ಕಂಡುಬರಲಾರಂಭಿಸಿದೆ.

ತುಂಗಾ ಜಲಾಶಯದಿಂದ (tungadam) 70 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿರುವುದರಿಂದ, ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು (tunga river in shivamogga) ಅಪಾಯದ ಮಟ್ಟದಲ್ಲಿ (danger level) ಹರಿಯುತ್ತಿದೆ. ನದಿಯಂಚಿನ ತಗ್ಗು ಪ್ರದೇಶಗಳಿಗೆ (low lying areas) ನೀರು ನುಗ್ಗುವ ಭೀತಿ ಎದುರಾಗಿದೆ. ಅಪಾಯದ ಮಟ್ಟ ತೋರ್ಪಡಿಸುವ ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪವು ಮುಳುಗಿದೆ. ಇದರ ಮೇಲೆ ಸುಮಾರು 3 ಅಡಿಯಷ್ಟು ನೀರು ಹರಿಯುತ್ತಿದೆ.

ಡ್ಯಾಂನಿಂದ ಬಿಡುತ್ತಿರುವ ನೀರಿನ ಪ್ರಮಾಣ 80 ಸಾವಿರ ಕ್ಯೂಸೆಕ್ ಮೇಲ್ಪಟ್ಟರೆ ನಗರದ ನದಿಪಾತ್ರದ ತಗ್ಗು ಪ್ರದೇಶಗಳಲ್ಲಿನ ಜನವಸತಿ ಪ್ರದೇಶಗಳು (residential areas) ಜಲಾವೃತವಾಗುವ (flooded) ಆತಂಕವಿದೆ. ಈಗಾಗಲೇ ಮಹಾನಗರ ಪಾಲಿಕೆ (corporation) ಆಡಳಿತವು ಜಲಾವೃತ ಸಾಧ್ಯತೆಯಿರುವ ಪ್ರದೇಶಗಳ ನಿವಾಸಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →