ಮಲೆನಾಡಿನಲ್ಲಿ ಮಳೆಯ ಅಬ್ಬರ : ಭದ್ರಾ ಡ್ಯಾಂ ನೀರಿನ ಸಂಗ್ರಹದಲ್ಲಿ ಗಣನೀಯ ಏರಿಕೆ!

Heavy rains in the hills: Bhadra Dam water storage has increased substantially! ಮಲೆನಾಡಿನಲ್ಲಿ ಮಳೆಯ ಅಬ್ಬರ : ಭದ್ರಾ ಡ್ಯಾಂ ನೀರಿನ ಸಂಗ್ರಹದಲ್ಲಿ ಗಣನೀಯ ಏರಿಕೆ!

ಶಿವಮೊಗ್ಗ (shivamogga), ಜು. 19: ಮಧ್ಯ ಕರ್ನಾಟಕದ (central karnataka) ಪ್ರಮುಖ ಜಲಾಶಯ ಭದ್ರಾ ಡ್ಯಾಂ (bhadra dam) ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ (heavy rainfall) ಮುಂದುವರಿದಿದೆ. ಇದರಿಂದ ಡ್ಯಾಂ ಒಳಹರಿವಿನಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರಲಾರಂಭಿಸಿದೆ. ಇದರಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ, ಡ್ಯಾಂನಲ್ಲಿ 4 ಅಡಿಯಷ್ಟು ನೀರು ಸಂಗ್ರಹವಾಗಿದೆ!

ಶುಕ್ರವಾರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ಒಳಹರಿವು (inflow) 49,555 ಕ್ಯೂಸೆಕ್ ಗೆ ಏರಿಕೆಯಾಗಿದೆ. 181 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ (out flow). ಪ್ರಸ್ತುತ ಡ್ಯಾಂನಲ್ಲಿ 157. 11 (ಗರಿಷ್ಠ ಮಟ್ಟ : 186) ಅಡಿ ನೀರು ಸಂಗ್ರಹವಾಗಿದೆ (water storage). ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 141. 7 ಅಡಿ ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಡ್ಯಾಂನಲ್ಲಿ (dam) ಸುಮಾರು 16 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ.

ಉಳಿದಂತೆ ತುಂಗಾ ಜಲಾಶಯದ (tunga dam) ಒಳಹರಿವಿನಲ್ಲಿ ತುಸು ಇಳಿಕೆ ಕಂಡುಬಂದಿದೆ. 68,895 ಕ್ಯೂಸೆಕ್ (cusec) ಒಳಹರಿವಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟವಾದ (maximum level) 588. 24 ಮೀಟರ್ ತಲುಪಿರುವುದರಿಂದ 64,312 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (out flow).

ಮಳೆ ವಿವರ : ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆಯ (rain) ವಿವರ ಈ ಮುಂದಿನಂತಿದೆ. ಶಿವಮೊಗ್ಗ (shimoga) 37. 80 ಮಿ.ಮೀ., ಭದ್ರಾವತಿ (bhadravathi) 27. 10 ಮಿ.ಮೀ., ತೀರ್ಥಹಳ್ಳಿ (thirthahalli) 83. 60 ಮಿ.ಮೀ., ಸಾಗರ (sagar) 97. 20 ಮಿ.ಮೀ., ಶಿಕಾರಿಪುರ (shikaripur) 52. 60 ಮಿ.ಮೀ., ಸೊರಬ (sorab) 77. 40 ಮಿ.ಮೀ. ಹಾಗೂ ಹೊಸನಗರದಲ್ಲಿ (hosanagara) 102 ಮಿ.ಮೀ. ವರ್ಷಧಾರೆಯಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →