ಸೊರಬ, ಶಿಕಾರಿಪುರ, ಸಾಗರದ ಪ್ರವಾಹ ಪೀಡಿತ ಸ್ಥಳಗಳಿಗೆ ಎಸ್ಪಿ ಭೇಟಿ

SP visits Soraba, Shikaripura, Sagar flood affected areas ಸೊರಬ, ಶಿಕಾರಿಪುರ, ಸಾಗರದ ಪ್ರವಾಹ ಪೀಡಿತ ಸ್ಥಳಗಳಿಗೆ ಎಸ್ಪಿ ಭೇಟಿ

ಶಿವಮೊಗ್ಗ (shivamogga), ಜು. 19: ಮಲೆನಾಡಿನಾದ್ಯಂತ (malnad) ಭಾರೀ ಮಳೆ (heavy rainfall) ಮುಂದುವರಿದಿದೆ. ನದಿ, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿವೆ. ಮತ್ತೋಂದೆಡೆ ಹವಾಮಾನ ಇಲಾಖೆಯು ಮಳೆ ಆರ್ಭಟ ಮುಂದುವರಿಯುವ ಸೂಚನೆ ನೀಡಿದ್ದು, ರೆಡ್ ಅಲರ್ಟ್ (red alert) ಘೋಷಿಸಿದೆ.

ಈ ನಡುವೆ ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ (shimoga sp g k mithunkumar) ಅವರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ (flood affected areas) ಜು. 19 ರ ಶುಕ್ರವಾರ ಖುದ್ದು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸ್ ಠಾಣೆಗಳಿಂದ (police stations) ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ವೀಕ್ಷಣೆ ಮಾಡಿದರು.

ಶಿಕಾರಿಪುರ ತಾಲೂಕಿನ (shikaripura taluk) ಅಂಜನಾಪುರ, ಕೊಟ್ಟ, ಕೊಡಸೂರು, ಸೊರಬ ತಾಲೂಕಿನ (sorab taluk) ಅಂದವಳ್ಳಿ, ತಟ್ಟಿಗೆರೆ, ಸಾಗರ ತಾಲೂಕಿನ (sagar taluk) ಸೈದೂರು, ಕೆಲವೆ ಮೊದಲಾದೆಡೆ ಭೇಟಿಯಿತ್ತು ಪ್ರವಾಹ ಸ್ಥಿತಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪ್ರವಾಹ ಪೀಡಿತ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸ್ಥಳೀಯ ಪೊಲೀಸರಿಗೆ ಸಲಹೆ ಸೂಚನೆ ನೀಡಿದ್ದಾರೆ.

ಸೂಚನೆ : ನೆರೆ ಪೀಡಿತ ಪ್ರದೇಶಗಳಲ್ಲಿ ನದಿ ನೀರಿಗೆ (river water) ಇಳಿಯುವುದು, ಈಜಾಡುವುದು (swimming), ಅಪಾಯಕಾರಿ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದು, ಪೋಟೋ (photo), ಸೆಲ್ಪಿ (selfi) ತೆಗೆದುಕೊಳ್ಳುವುದು ಸಾರ್ವಜನಿಕರಿಗೆ ಅಪಾಯಕಾರಿಯಾಗಿರುತ್ತದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆಯು (police dept) ಪ್ರವಾಹ ಪೀಡಿತ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ, ಸೂಚನಾ ಫಲಕ ಅಳವಡಿಸಿದೆ. ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

One Comment on “ಸೊರಬ, ಶಿಕಾರಿಪುರ, ಸಾಗರದ ಪ್ರವಾಹ ಪೀಡಿತ ಸ್ಥಳಗಳಿಗೆ ಎಸ್ಪಿ ಭೇಟಿ”

Comments are closed.