ಮಲೆನಾಡಲ್ಲಿ ಭಾರೀ ಮಳೆ – ಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 5 ಅಡಿ ನೀರು ಸಂಗ್ರಹ!
ಶಿವಮೊಗ್ಗ (shivamogga), ಜು. 20: ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ (shivamogga – davanagere) ರೈತರ ಜೀವನಾಡಿ ಎಂದೇ ಕರೆಯಲಾಗುವ, ಮಧ್ಯ ಕರ್ನಾಟಕದ (central karnataka) ಪ್ರಮುಖ ಜಲಾಶಯವಾದ ಭದ್ರಾ ಒಳಹರಿವಿನಲ್ಲಿ ಶನಿವಾರ ತುಸು ಇಳಿಕೆ ಕಂಡುಬಂದಿದೆ.
ಉಳಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂಗೆ ಸುಮಾರು 5 ಅಡಿಯಷ್ಟು (feet) ನೀರು ಸಂಗ್ರಹವಾಗಿದೆ. ಇದು ಪ್ರಸ್ತುತ ಮುಂಗಾರು ಮಳೆ (monsoon rain) ಅವಧಿ ವೇಳೆ ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದ ನೀರು ಸಂಗ್ರಹವಾಗಿರುವುದು ಇದೇ ಮೊದಲಾಗಿದೆ.
ಶನಿವಾರ (ಜು. 20) ರ ಬೆಳಿಗ್ಗೆ 6 ಗಂಟೆಯ ಮಾಹಿತಿಯಂತೆ, ಭದ್ರಾ ಡ್ಯಾಂನ (bhadra dam) ಒಳಹರಿವು 46,876 ಕ್ಯೂಸೆಕ್ ಇದೆ. ಜು. 19 ರಂದು ಒಳಹರಿವಿನ (inflow) ಪ್ರಮಾಣ 49,555 ಕ್ಯೂಸೆಕ್ ಇತ್ತು. ಪ್ರಸ್ತುತ ಡ್ಯಾಂನ ಹೊರಹರಿವು (out flow) 186 ಕ್ಯೂಸೆಕ್ ಇದೆ. ಸದ್ಯ ಭದ್ರಾ ಡ್ಯಾಂ ನೀರಿನ ಮಟ್ಟ 162 ಅಡಿ 3 ಇಂಚು ಇದೆ (ಗರಿಷ್ಠ ಮಟ್ಟ : 186 ಅಡಿ) ಇದೆ.
ಕಳೆದ ವರ್ಷ (last year) ಇದೇ ದಿನದಂದು ಡ್ಯಾಂನ ನೀರಿನ ಮಟ್ಟ 142. 1 ಅಡಿ ನೀರು ಸಂಗ್ರಹವಾಗಿತ್ತು. ಪ್ರಸ್ತುತ ಮುಂಗಾರು ಮಳೆ (mungaru male) ಅವಧಿ ವೇಳೆ ಜಲಾನಯನ ಪ್ರದೇಶ (catchment areas) ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ (heavy rainfall), ಡ್ಯಾಂ ನೀರಿನ ಸಂಗ್ರಹದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ 21. 2 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.
ಭದ್ರಾ ಜಲಾಶಯವು (bhadra dam) ಒಟ್ಟಾರೆ 45. 040 ಟಿಎಂಸಿಯಷ್ಟು (tmc) ನೀರು ಸಂಗ್ರಹಣಾ ಸಾರ್ಮರ್ಥ್ಯ ಹೊಂದಿದೆ. ಪ್ರಸ್ತುತ 28. 336 ಟಿಎಂಸಿ ನೀರು ಸಂಗ್ರಹವಾಗಿದೆ. ಪ್ರಸ್ತುತ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆ (heavy to heavy rainfall) ಮುಂದುವರಿದಿದೆ. ಈ ಕಾರಣದಿಂದ ಪ್ರಸ್ತುತ ವರ್ಷ ಡ್ಯಾಂ ಗರಿಷ್ಠ ಮಟ್ಟ (maximum level) ತಲುಪುವ ಸಾಧ್ಯತೆಗಳು ಗೋಚರವಾಗುತ್ತಿವೆ.
More Stories
shimoga news | ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
Shivamogga: Film artist and lawyer Purnima Prasanna honoured with ‘Manava Ratna Shrestha’ state award
ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
hosanagara news | ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
Worker dies in a coconut plantation due to electric shock; another seriously injured!
ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
railway news | ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
Traffic control of important trains : When? What is the reason?
ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
Shivamogga: Houses damaged due to cylinder explosion – MLA visits
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 26 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga | ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
Sulochanamma a resident of JPN Road Shimoga passed away
ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
