ತೋಟಗಾರಿಕೆ ಇಲಾಖೆ ಅಧಿಕಾರಿ ಬಳಿ 2 ಕೋಟಿ ರೂ.ಗೂ ಅಧಿಕ ಅಕ್ರಮ ಸಂಪತ್ತು ಪತ್ತೆ! : ಶಿವಮೊಗ್ಗ ಲೋಕಾಯುಕ್ತ ಮಾಹಿತಿ

Illicit wealth of more than 2 crore rupees found with Horticulture Department official: Shimoga Lokayukta information ತೋಟಗಾರಿಕೆ ಇಲಾಖೆ ಅಧಿಕಾರಿ ಬಳಿ 2 ಕೋಟಿ ರೂ.ಗೂ ಅಧಿಕ ಅಕ್ರಮ ಸಂಪತ್ತು ಪತ್ತೆ : ಶಿವಮೊಗ್ಗ ಲೋಕಾಯುಕ್ತ ಮಾಹಿತಿ

ಶಿವಮೊಗ್ಗ, ಜು. 22: ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖೆ (Horticulture Department) ಉಪ ನಿರ್ದೇಶಕ ಪ್ರಕಾಶ್ ಜಿ ಎನ್ ಅವರ ಮನೆ ಸೇರಿದಂತೆ ಮೂರು ಕಡೆ ಏಕಕಾಲಕ್ಕೆ ನಡೆಸಿದ ದಾಳಿಯ ವೇಳೆ 2,05,23,330 ರೂ. ಮೌಲ್ಯದ ಅಕ್ರಮ ಸಂಪತ್ತು (Illicit wealth) ಪತ್ತೆಯಾಗಿದೆ ಎಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸರು (shimoga Lokayukta police information) ತಿಳಿಸಿದ್ದಾರೆ.

ಈ ಕುರಿತಂತೆ ಸೋಮವಾರ ಲೋಕಾಯುಕ್ತ ಪೊಲೀಸರು (Lokayukta police) ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಸಂಪತ್ತು (wealth more than income) ಸಂಗ್ರಹಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕಾಶ್ ಜಿ ಎನ್ ಅವರ ವಿರುದ್ದ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ (Prevention of Corruption Act) ಪ್ರಕರಣ ದಾಖಲಿಸಲಾಗಿತ್ತು.

19/07/2024 ರಂದು ಆರೋಪಿತರಿಗೆ ಸೇರಿದ ಮೂರು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ (simultaneously raid) ನಡೆಸಲಾಗಿತ್ತು. ಈ ವೇಳೆ 1 ಖಾಲಿ ನಿವೇಶನ, 2 ಮನೆಗಳು,1.57 ಕೋಟಿ ರೂ. ಮೌಲ್ಯದ  2.8 ಎಕರೆ ಕೃಷಿ ಜಮೀನು ಪತ್ತೆಯಾಗಿರುತ್ತದೆ.

ಹಾಗೂ ಅವರ ವಾಸದ ಮನೆಯಲ್ಲಿ 38,32,630 ರೂ. ಮೌಲ್ಯದ ಚಿನ್ನ-ಬೆಳ್ಳಿಯ ವಸ್ತುಗಳು, 5.20 ಲಕ್ಷ ರೂ. ಮೌಲ್ಯದ ವಾಹನಗಳು, 11.30 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಹಾಗೂ 12,86,500  ನಗದು ಪತ್ತೆಯಾಗಿರುತ್ತದೆ ಎಂದು ಲೋಕಾಯುಕ್ತ ಪೊಲೀಸರು (Lokayukta police) ತಿಳಿಸಿದ್ದಾರೆ.

ನಂತರ ತನಿಖೆಯನ್ನು ಮುಂದುವರಿಸಿದ್ದು, 20/07/2024 ರಂದು ಪ್ರಕಾಶ್ ಜಿ.ಎನ್ ರವರ ಪತ್ನಿ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್‍ (Bank Locker) ಶೋಧನೆ ಮಾಡಲಾಗಿತ್ತು. ಲಾಕರ್‍ನಲ್ಲಿ 32,06,000 ನಗದು  ಮತ್ತು ಅಂದಾಜು 18,48,200 ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿರುತ್ತದೆ. ಅಧಿಕಾರಿಯು ಅಂದಾಜು 2,05,23,330 ರೂ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಅವರ ಮನೆ ಮತ್ತು ಲಾಕರ್ ನಲ್ಲಿ (Bank Locker) ಪತ್ತೆಯಾದ ನಗದು (cash) 44,06,000 ಗಳನ್ನು ತನಿಖೆ ಸಂಬಂದ ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ (shimoga Lokayukta sp) ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ಇನ್ಸ್’ಪೆಕ್ಟರ್ (inspector) ಹೆಚ್.ಎಸ್.ಸುರೇಶ್ ಅವರು ತನಿಖೆ ಮುಂದುವರೆಸಿರುತ್ತಾರೆ.

ದಾಳಿಯ ವೇಳೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆ ಅಧಿಕಾರಿ – ಸಿಬ್ಬಂದಿಗಳ ಜೊತೆಗೆ  ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭಾಗಿಯಾಗಿರುತ್ತಾರೆ ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →