ಪೊಲೀಸರ ಸಕಾಲಿಕ ಕ್ರಮ : ತುಂಬಿ ಹರಿಯುತ್ತಿದ್ದ ಹೊಳೆಗೆ ಧುಮುಕುತ್ತಿದ್ದ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ!   

Timely action of the police: The woman who was diving into the overflowing stream the two children were saved! ಪೊಲೀಸರ ಸಕಾಲಿಕ ಕ್ರಮ : ತುಂಬಿ ಹರಿಯುತ್ತಿದ್ದ ಹೊಳೆಗೆ ಧುಮುಕುತ್ತಿದ್ದ ಮಹಿಳೆ ಇಬ್ಬರು ಮಕ್ಕಳ ರಕ್ಷಣೆ!

ಸಾಗರ (sagar), ಜು. 23: ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಆತ್ಮಹತ್ಯೆಗೆ (suicide) ಮುಂದಾಗಿದ್ದ ಮಹಿಳೆ ಹಾಗೂ ಅವರ ಇಬ್ಬರು ಮಕ್ಕಳನ್ನು (women – childrens) ಪೊಲೀಸರು ರಕ್ಷಣೆ ಮಾಡಿದ ಸಿನಿಮೀಯ ಶೈಲಿಯ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ಬಳಿ ಜು. 22 ರಂದು ನಡೆದಿದೆ.

ಮಹಿಳೆಯೋರ್ವರು ಇಬ್ಬರು ಮಕ್ಕಳೊಂದಿಗೆ, ಕುಗ್ವೆ ಗ್ರಾಮದ (kugwe village of sagar taluk) ಹೊಳೆಯ ಬಳಿ ಮಧ್ಯಾಹ್ನ ಆಗಮಿಸಿದ್ದರು. ನೀರಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದರು (to commit suicide by diving into water). ಇದನ್ನು ಗಮನಿಸಿದ ಸಾರ್ವಜನಿಕರು ತುರ್ತು ಸಹಾಯವಾಣಿ ಸಂಖ್ಯೆ ಇ.ಆರ್.ಆರ್.ಎಸ್ – 112 (errs-112) ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ವಿಷಯ ತಿಳಿಯುತ್ತಿದ್ದಂತೆ ಇ.ಆರ್.ಆರ್.ಎಸ್ – 112 ವಾಹನದ ಸಿಬ್ಬಂದಿಗಳಾದ ಹೆಡ್ ಕಾನ್ಸ್’ಟೇಬಲ್ (head constable) ಶಿವರುದ್ರಯ್ಯ ಎ ಆರ್ ಹಾಗೂ ವಾಹನ ಚಾಲಕರಾದ ಡಿಎಆರ್ ಎಪಿಸಿ (dar apc) ಶಿವಾನಂದ್ ಅವರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಹೊಳೆಯಲ್ಲಿ ಧುಮುಕಲು ಮುಂದಾಗಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಸಂರಕ್ಷಿಸಿದ್ದಾರೆ. ಈ ಮೂಲಕ ಮೂವರ ಜೀವ ಉಳಿಸಿದ್ದಾರೆ. ಸಿಬ್ಬಂದಿಗಳ ಸಕಾಲಿಕ ಕ್ರಮಕ್ಕೆ ಜಿಲ್ಲಾ ರಕ್ಷಣಾಧಿಕಾರಿ (shimoga sp) ಜಿ. ಕೆ. ಮಿಥುನ್ ಕುಮಾರ್ (g k mithunkumar) ಅವರು ಪ್ರಶಂಸೆ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →