ಭದ್ರಾ ಜಲಾಶಯ ಒಳಹರಿವಿನಲ್ಲಿ ಮತ್ತಷ್ಟು ಇಳಿಕೆ!

Further decrease in Bhadra reservoir inflow! ಭದ್ರಾ ಜಲಾಶಯ ಒಳಹರಿವಿನಲ್ಲಿ ಮತ್ತಷ್ಟು ಇಳಿಕೆ!

ಶಿವಮೊಗ್ಗ, ಜು. 24: ಮಧ್ಯ ಕರ್ನಾಟಕ (central karnataka) ಭಾಗದ ಪ್ರಮುಖ ಜಲಾಶವಾದ ಭದ್ರಾಗೆ, ಕಳೆದ ಮೂರು ದಿನಗಳಿಂದ ಒಳಹರಿವಿನ ಪ್ರಮಾಣದಲ್ಲಿ ನಿರಂತರವಾಗಿ ಇಳಿಕೆ ಕಂಡುಬರಲಾರಂಭಿಸಿದೆ.

ಜಲಾನಯನ ಪ್ರದೇಶ (catchment area) ವ್ಯಾಪ್ತಿಯ ಚಿಕ್ಕಮಗಳೂರು (chikkamagaluru) ಜಿಲ್ಲೆಯ ಪ್ರದೇಶಗಳಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಮಳೆಯ (rain) ಪ್ರಮಾಣ, ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದೆ. ಇದು ಭದ್ರಾ ಡ್ಯಾಂಗೆ (bhadra dam) ಹರಿದು ಬರುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗಲು ಮುಖ್ಯ ಕಾರಣವಾಗಿದೆ.

ಬುಧವಾರ ಬೆಳಿಗ್ಗೆಯ ಮಾಹಿತಿಯಂತೆ, ಭದ್ರಾ ಡ್ಯಾಂ ಒಳಹರಿವು (inflow) 15,383 ಕ್ಯೂಸೆಕ್ ಇದೆ. ಮಂಗಳವಾರ ಈ ಪ್ರಮಾಣ 20,045 ಕ್ಯೂಸೆಕ್ ಇತ್ತು. ಡ್ಯಾಂನ ನೀರಿನ ಮಟ್ಟ 169 ಅಡಿ 5 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂಗೆ ಕೇವಲ 1. 3 ಅಡಿಯಷ್ಟು (feet) ನೀರು ಹರಿದು ಬಂದಿದೆ.

ಕಳೆದ ವರ್ಷ (last year) ಇದೇ ದಿನದಂದು ಡ್ಯಾಂ ನೀರಿನ ಮಟ್ಟ (bhadr dam water leve) 149. 5 ಅಡಿಯಿತ್ತು. ಪ್ರಸ್ತುತ ವರ್ಷ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದರಿಂದ (heavy rainfall), ಕಳೆದ ವರ್ಷಕ್ಕಿಂತ ಸರಿಸುಮಾರು 20 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ. ಇದು ಶಿವಮೊಗ್ಗ, ದಾವಣಗೆರೆ (shimoga, davanagere) ಜಿಲ್ಲೆಗಳ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಭದ್ರಾ ಜಲಾಶಯ ಗರಿಷ್ಠ ಮಟ್ಟ ತಲುಪಲು (bhadra dam maximum level) ಇನ್ನೂ ಸುಮಾರು 16. 5 ಅಡಿಯಷ್ಟು ನೀರು ಸಂಗ್ರಹವಾಗಬೇಕಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆ ಚುರುಕುಗೊಂಡರೆ, ಜುಲೈ ಅಂತ್ಯದೊಳಗೆ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →