ಮಲೆನಾಡಲ್ಲಿ ಮತ್ತೆ ಮಳೆ ಚುರುಕು : ಭದ್ರಾ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ!

Heavy rain again in the hills : increase in Bhadra Dam inflow! ಮಲೆನಾಡಲ್ಲಿ ಮತ್ತೆ ಮಳೆ ಚುರುಕು : ಭದ್ರಾ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ!

ಶಿವಮೊಗ್ಗ (shivamogga), ಜು. 25: ಮಲೆನಾಡಿನಲ್ಲಿ ಇಳಿಕೆಯಾಗಿದ್ದ ಮುಂಗಾರು ಮಳೆ (monsoon rain) ಮತ್ತೆ ಚುರುಕುಗೊಳ್ಳಲಾರಂಭಿಸಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ (heavy rainfall), ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ ಭದ್ರಾ ಜಲಾಶಯದ ಒಳಹರಿವಿನಲ್ಲಿ ಮತ್ತೆ ಹೆಚ್ಚಳ ಕಂಡುಬಂದಿದೆ.

ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ, ಭದ್ರಾ ಜಲಾಶಯ (bhadra dam) ಒಳಹರಿವು 26,044 ಕ್ಯೂಸೆಕ್ ಗೆ ಏರಿಕೆಯಾಗಿದೆ. ಬುಧವಾರ ಈ ಪ್ರಮಾಣ 15,383 ಕ್ಯೂಸೆಕ್ ನಷ್ಟಿತ್ತು. ಕಳೆದ ಮೂರು ದಿನಗಳಿಂದ ಡ್ಯಾಂ ಒಳಹರಿವಿನಲ್ಲಿ (inflow) ನಿರಂತರ ಇಳಿಕೆ ಕಂಡುಬಂದಿತ್ತು.

ಉಳಿದಂತೆ ಡ್ಯಾಂನ (reservoir) ನೀರಿನ ಮಟ್ಟ 171 ಅಡಿ 6 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂನಲ್ಲಿ ಸರಿಸುಮಾರು ಎರಡೂವರೆ ಅಡಿಯಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ (bhadra dam water level) 152. 9 ಅಡಿ ನೀರು ಶೇಖರಣೆಯಾಗಿತ್ತು.

ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಲು (maximum level) ಇನ್ನೂ ಹದಿನಾಲ್ಕುವರೆ ಅಡಿಯಷ್ಟು ನೀರು ಹರಿದುಬರಬೇಕಾಗಿದೆ. ಪ್ರಸ್ತುತ ಜಲಾನಯನ ಪ್ರದೇಶ (catchment areas) ವ್ಯಾಪ್ತಿಯಲ್ಲಿ ಮತ್ತೆ ಮಳೆ (rain) ಚುರುಕುಗೊಂಡಿದೆ. ಇದರಿಂದ ಪ್ರಸ್ತುತ ವರ್ಷ ಡ್ಯಾಂ ಗರಿಷ್ಠ ಮಟ್ಟ ತಲುಪುವ ನಿರೀಕ್ಷೆಗಳು ಕಂಡುಬರುತ್ತಿವೆ.

ಕಳೆದ ವರ್ಷ ಮಲೆನಾಡು (malnad) ಭಾಗದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲ (terrible drought) ಸ್ಥಿತಿ ತಲೆದೋರಿತ್ತು. ಕುಡಿಯುವ ನೀರಿಗೂ ಹಾಹಾಕಾರ ತಲೆದೋರಿತ್ತು. ಆದರೆ ಪ್ರಸ್ತುತ ವರ್ಷ ಉತ್ತಮ ಮುಂಗಾರು ಮಳೆಯಿಂದ ಮಲೆನಾಡಿನ ಕೆರೆಕಟ್ಟೆ, ಹಳ್ಳಕೊಳ್ಳ, ನದಿಗಳು (rivers) ಮೈದುಂಬಿ ಹರಿಯಲಾರಂಭಿಸಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →