Heavy rain again in the hills : increase in Bhadra Dam inflow! ಮಲೆನಾಡಲ್ಲಿ ಮತ್ತೆ ಮಳೆ ಚುರುಕು : ಭದ್ರಾ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ!

ಮಲೆನಾಡಲ್ಲಿ ಮತ್ತೆ ಮಳೆ ಚುರುಕು : ಭದ್ರಾ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ!

ಶಿವಮೊಗ್ಗ (shivamogga), ಜು. 25: ಮಲೆನಾಡಿನಲ್ಲಿ ಇಳಿಕೆಯಾಗಿದ್ದ ಮುಂಗಾರು ಮಳೆ (monsoon rain) ಮತ್ತೆ ಚುರುಕುಗೊಳ್ಳಲಾರಂಭಿಸಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ (heavy rainfall), ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ ಭದ್ರಾ ಜಲಾಶಯದ ಒಳಹರಿವಿನಲ್ಲಿ ಮತ್ತೆ ಹೆಚ್ಚಳ ಕಂಡುಬಂದಿದೆ.

ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ, ಭದ್ರಾ ಜಲಾಶಯ (bhadra dam) ಒಳಹರಿವು 26,044 ಕ್ಯೂಸೆಕ್ ಗೆ ಏರಿಕೆಯಾಗಿದೆ. ಬುಧವಾರ ಈ ಪ್ರಮಾಣ 15,383 ಕ್ಯೂಸೆಕ್ ನಷ್ಟಿತ್ತು. ಕಳೆದ ಮೂರು ದಿನಗಳಿಂದ ಡ್ಯಾಂ ಒಳಹರಿವಿನಲ್ಲಿ (inflow) ನಿರಂತರ ಇಳಿಕೆ ಕಂಡುಬಂದಿತ್ತು.

ಉಳಿದಂತೆ ಡ್ಯಾಂನ (reservoir) ನೀರಿನ ಮಟ್ಟ 171 ಅಡಿ 6 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂನಲ್ಲಿ ಸರಿಸುಮಾರು ಎರಡೂವರೆ ಅಡಿಯಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ (bhadra dam water level) 152. 9 ಅಡಿ ನೀರು ಶೇಖರಣೆಯಾಗಿತ್ತು.

ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಲು (maximum level) ಇನ್ನೂ ಹದಿನಾಲ್ಕುವರೆ ಅಡಿಯಷ್ಟು ನೀರು ಹರಿದುಬರಬೇಕಾಗಿದೆ. ಪ್ರಸ್ತುತ ಜಲಾನಯನ ಪ್ರದೇಶ (catchment areas) ವ್ಯಾಪ್ತಿಯಲ್ಲಿ ಮತ್ತೆ ಮಳೆ (rain) ಚುರುಕುಗೊಂಡಿದೆ. ಇದರಿಂದ ಪ್ರಸ್ತುತ ವರ್ಷ ಡ್ಯಾಂ ಗರಿಷ್ಠ ಮಟ್ಟ ತಲುಪುವ ನಿರೀಕ್ಷೆಗಳು ಕಂಡುಬರುತ್ತಿವೆ.

ಕಳೆದ ವರ್ಷ ಮಲೆನಾಡು (malnad) ಭಾಗದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲ (terrible drought) ಸ್ಥಿತಿ ತಲೆದೋರಿತ್ತು. ಕುಡಿಯುವ ನೀರಿಗೂ ಹಾಹಾಕಾರ ತಲೆದೋರಿತ್ತು. ಆದರೆ ಪ್ರಸ್ತುತ ವರ್ಷ ಉತ್ತಮ ಮುಂಗಾರು ಮಳೆಯಿಂದ ಮಲೆನಾಡಿನ ಕೆರೆಕಟ್ಟೆ, ಹಳ್ಳಕೊಳ್ಳ, ನದಿಗಳು (rivers) ಮೈದುಂಬಿ ಹರಿಯಲಾರಂಭಿಸಿವೆ.

A leopard died after getting caught in a trap that was used to catch a wild boar in the farm! ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು! Previous post ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು!
Shimoga - Collapsing bridge barrier: Barricade placed by National Highways Department as a precaution ಶಿವಮೊಗ್ಗ - ಕುಸಿಯುತ್ತಿರುವ ಸೇತುವೆ ತಡೆಗೋಡೆ : ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಬ್ಯಾರಿಕೇಡ್ ಹಾಕಿ ಮುನ್ನೆಚ್ಚರಿಕೆ Next post ಕುಸಿಯುತ್ತಿರುವ ಸೇತುವೆ ತಡೆಗೋಡೆ : ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಬ್ಯಾರಿಕೇಡ್ ಹಾಕಿ ಮುನ್ನೆಚ್ಚರಿಕೆ!