ಕುಸಿಯುತ್ತಿರುವ ಸೇತುವೆ ತಡೆಗೋಡೆ : ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಬ್ಯಾರಿಕೇಡ್ ಹಾಕಿ ಮುನ್ನೆಚ್ಚರಿಕೆ!

Shimoga - Collapsing bridge barrier: Barricade placed by National Highways Department as a precaution ಶಿವಮೊಗ್ಗ - ಕುಸಿಯುತ್ತಿರುವ ಸೇತುವೆ ತಡೆಗೋಡೆ : ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಬ್ಯಾರಿಕೇಡ್ ಹಾಕಿ ಮುನ್ನೆಚ್ಚರಿಕೆ

ಶಿವಮೊಗ್ಗ (shivamogga), ಜು. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದ (gadikoppa) ಶರಾವತಿ ಡೆಂಟಲ್ ಕಾಲೇಜ್ ಬಳಿಯ ರಾಷ್ಟ್ರೀಯ ಹೆದ್ದಾರಿ (national highway) ಸೇತುವೆ ಬಳಿ ಕುಸಿಯುತ್ತಿರುವ ತಡೆಗೋಡೆ ಬಳಿ, ಕೊನೆಗೂ ರಾಷ್ಟ್ರೀಯ ಹೆದ್ದಾರಿ (national highway) ಇಲಾಖೆಯು ಕೆಲ ಸುರಕ್ಷತಾ ಕ್ರಮಗಳನ್ನು (Safety measures) ಕೈಗೊಂಡಿದೆ.

ತಡೆಗೋಡೆ ಕುಸಿತ (barrier collapse) ಕುರಿತಂತೆ ‘ಉದಯ ಸಾಕ್ಷಿ’ ನ್ಯೂಸ್ ವೆಬ್’ಸೈಟ್ ನಲ್ಲಿ ಪ್ರಕಟವಾದ ಸಚಿತ್ರ ಹಾಗೂ ವೀಡಿಯೋ ವರದಿಯ ನಂತರ ಎಚ್ಚೆತ್ತುಕೊಂಡ ಇಲಾಖೆಯು, ಸ್ಥಳದಲ್ಲಿ ಪೊಲೀಸ್ ಇಲಾಖೆಯ ನೆರವಿನೊಂದಿಗೆ ಬ್ಯಾರಿಕೇಡ್ ಹಾಗೂ ಎಚ್ಚರಿಕೆಯ ಟೇಪ್ (barricade and caution tape) ಹಾಕಿದೆ.

ತಾತ್ಕಾಲಿಕವಾಗಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದ್ದು, ಮಳೆಗಾಲ ಪೂರ್ಣಗೊಂಡ ನಂತರ ತಡೆಗೋಡೆ ದುರಸ್ತಿ ಕಾರ್ಯ ಕೈಗೊಳ್ಳುವುದಾಗಿ ಹೆದ್ದಾರಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ಕಳೆದ ಹಲವು ತಿಂಗಳುಗಳ ಹಿಂದೆಯೇ ಹೆದ್ದಾರಿಯ ಸೇತುವೆಯ ಒಂದು ಬದಿಯ ತಡೆಗೋಡೆಯ ಅಲ್ಪ ಭಾಗ ಕುಸಿತವಾಗಿತ್ತು. ಇತ್ತೀಚೆಗೆ ಬೀಳುತ್ತಿರುವ ಭಾರೀ ಮಳೆಗೆ (heavy rainfall) ಮಣ್ಣು ಕುಸಿದು ಬೀಳಲಾರಂಭಿಸಿತ್ತು. ಇದು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆಗಳಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು.

ಸ್ಥಳದಲ್ಲಿ ಇಷ್ಟೆಲ್ಲ ಅಪಾಯಕಾರಿ ಸ್ಥಿತಿಯಿದ್ದರೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಯಾವುದೇ ಕನಿಷ್ಠ ಸುರಕ್ಷತಾ ಕ್ರಮಗಳ ಪಾಲನೆ ಮಾಡಿಲ್ಲ. ತಡೆಗೋಡೆ ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →