ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ : ಚಕ್ರಾದಲ್ಲಿ ಅತ್ಯಧಿಕ 325 ಮಿ.ಮೀ. ಮಳೆ!

Rainfall in Western Ghats : Maximum 325 millimeter rain in Chakra ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ : ಚಕ್ರಾದಲ್ಲಿ ಅತ್ಯಧಿಕ 325 ಮಿ.ಮೀ. ಮಳೆ!

ಶಿವಮೊಗ್ಗ (shivamogga), ಜು. 27: ಜಿಲ್ಲೆಯ ಪಶ್ಚಿಮಘಟ್ಟ (western ghat) ಪ್ರದೇಶ ವ್ಯಾಪ್ತಿಗಳಲ್ಲಿ ಅಕ್ಷರಶಃ ವರ್ಷಧಾರೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ..! (heavy to heavy rainfall) ಹೌದು. ಕಡಿಮೆಯಾಗಿದ್ದ ಮಳೆಯ ತೀವ್ರತೆ ಮತ್ತೆ ಚುರುಕುಗೊಂಡಿದೆ. ಧಾರಾಕಾರ ವರ್ಷಧಾರೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ.

ಹೊಸನಗರ ತಾಲೂಕಿನಲ್ಲಿ (hosanagara taluk) ಮಳೆ ಅಬ್ಬರ ಮುಂದುವರಿದಿದೆ. ಚಕ್ರಾ (chakra) ಪ್ರದೇಶದಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು (rainfall), ಕಳೆದ 24 ಗಂಟೆ ಅವಧಿಯಲ್ಲಿ ಅತ್ಯದಿಕ 325 ಮಿಲಿ ಮೀಟರ್ (ಮಿ.ಮೀ. millimeter) ಮಳೆಯಾಗಿದೆ. ಇದು ಘಟ್ಟ ಪ್ರದೇಶದಲ್ಲಿನ ಮುಸಲಧಾರೆ (rain) ತೀವ್ರತೆಗೆ ಸಾಕ್ಷಿಯಾಗಿದೆ.

ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ಘಟ್ಟ ಪ್ರದೇಶಗಳಾದ ಮಾಸ್ತಿಕಟ್ಟೆಯಲ್ಲಿ (masthikatte) 205 ಮಿ.ಮೀ., ಯಡೂರು (yadur) 200 ಮಿ.ಮೀ., ಮಾಣಿಯಲ್ಲಿ (mani) 185 ಮಿ.ಮೀ., ಸಾವೇಹಕ್ಲುವಿನಲ್ಲಿ (savehakklu) 139 ಮಿ.ಮೀ ವರ್ಷಧಾರೆಯಾಗಿದೆ.

ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ, ಜಲಮೂಲಗಳ ನೀರಿನ ಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ನದಿ (riever), ಕೆರೆಕಟ್ಟೆ, ಹಳ್ಳಕೊಳ್ಳಗಳು ಮೈದುಂಬಿ ಹರಿಯಲಾರಂಭಿಸಿವೆ.

ಜು. 27 ರಂದು ರಜೆ : ಭಾರೀ ಮಳೆ (heavy rainfall) ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜು. 27 ರ ಶನಿವಾರ ಹೊಸನಗರ, ಸಾಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲೂಕು ವ್ಯಾಪ್ತಿಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ (announcement of holiday for schools and colleges) ಮಾಡಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →