1807 ಅಡಿಗೆ ತಲುಪಿದ ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ : ಕೆಪಿಸಿಎಲ್ ನಿಂದ ಎರಡನೇ ವಾರ್ನಿಂಗ್!

Linganamakki Reservoir water level reaches 1807 feet: Second warning from KPCL! 1807 ಅಡಿಗೆ ತಲುಪಿದ ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ : ಕೆಪಿಸಿಎಲ್ ನಿಂದ ಎರಡನೇ ವಾರ್ನಿಂಗ್!

ಶಿವಮೊಗ್ಗ, ಜು. 27: ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ (hydro power generating station) ಲಿಂಗನಮಕ್ಕಿ ಜಲಾಶಯದ (linganamakki dam) ಒಳಹರಿವಿನಲ್ಲಿ ನಿರಂತರವಾಗಿ ಏರಿಕೆ ಕಂಡುಬರಲಾರಂಭಿಸಿದೆ. ಡ್ಯಾಂ ಭರ್ತಿಗೆ ಇನ್ನೂ 12 ಅಡಿ ನೀರು ಬೇಕಾಗಿದೆ.

ಜಲಾಶಯ ಗರಿಷ್ಠ ಮಟ್ಟಕ್ಕೆ (maximum level) ಬರುತ್ತಿರುವುದರಿಂದ, ಕೆಪಿಸಿಎಲ್ (karnataka power corporation limited) ಸಂಸ್ಥೆಯು ನದಿ ಪಾತ್ರದ ಜನರಿಗೆ  ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ. ಎರಡನೇ ಹಂತದ ನೋಟೀಸ್ ಹೊರಡಿಸಿದೆ.

ಜು. 27 ರ ಶನಿವಾರದ ಮಾಹಿತಿಯಂತೆ, ಲಿಂಗನಮಕ್ಕಿ ಡ್ಯಾಂನ ಒಳಹರಿವು (inflow) 74,600 ಕ್ಯೂಸೆಕ್ ಗೆ ಏರಿಕೆಯಾಗಿದೆ. ನೀರಿನ ಮಟ್ಟ 1807 (ಗರಿಷ್ಠ ಮಟ್ಟ : 1819) ಅಡಿಯಿದೆ.

ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಹಾಗೂ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ (heavy to heavy rainfall) ಮುಂದುವರಿದಿರುವುದರಿಂದ, ಯಾವುದೇ ಸಂದರ್ಭದಲ್ಲಿ ಡ್ಯಾಂ ಗರಿಷ್ಠ ಮಟ್ಟ ತಲುಪಲಿದೆ. ಡ್ಯಾಂ ಭದ್ರತೆ ದೃಷ್ಟಿಯಿಂದ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಬೇಕಾಗುತ್ತದೆ (outflow).

ಈ ಹಿನ್ನೆಲೆಯಲ್ಲಿ ಅಣೆಕಟ್ಟಿಯ (dam) ಕೆಳದಂಡೆ ಹಾಗೂ ನದಿ ಪಾತ್ರದಲ್ಲಿ ವಾಸಿಸುತ್ತಿರುವ ನಾಗರೀಕರು ಎಚ್ಚರಿಕೆಯಿಂದಿರಬೇಕು. ನದಿಗೆ ಜಾನುವಾರುಗಳನ್ನು ಬಿಡಬಾರದು. ನದಿ ಪಾತ್ರದ ಸ್ಥಳದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಹಾಗೆಯೇ ಪ್ರವಾಸಿಗರು ಅನಗತ್ಯವಾಗಿ ನದಿಗೆ ಇಳಿಯಬಾರದು ಎಂದು ಕೆಪಿಸಿಎಲ್ (kpcl) ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →