ಶಿವಮೊಗ್ಗ – ಅವ್ಯವಸ್ಥೆಯ ಆಗರವಾಗುತ್ತಿರುವ ಸರ್ಕಾರಿ ಹಾಸ್ಟೆಲ್ ಗಳು : ಗಮನಹರಿಸುವುದೆ ಜಿಲ್ಲಾಡಳಿತ?

Shimoga - Govt hostels becoming chaotic : Is the district administration paying attention? ಶಿವಮೊಗ್ಗ - ಅವ್ಯವಸ್ಥೆಯ ಆಗರವಾಗುತ್ತಿರುವ ಸರ್ಕಾರಿ ಹಾಸ್ಟೆಲ್ ಗಳು : ಗಮನಹರಿಸುವುದೆ ಜಿಲ್ಲಾಡಳಿತ? ವರದಿ : ಬಿ. ರೇಣುಕೇಶ್

ಶಿವಮೊಗ್ಗ (shivamogga), ಜು. 30: ಜಿಲ್ಲೆಯಲ್ಲಿ ವಿವಿಧ ಇಲಾಖೆಯಡಿ ನಡೆಯುತ್ತಿರುವ ಹಾಸ್ಟೆಲ್ ಗಳು (govt hostels), ಅವ್ಯವಸ್ಥೆಯ ಆಗರವಾಗುತ್ತಿವೆ. ಸೌಲಭ್ಯಗಳ ದುರ್ಬಳಕೆಯಾಗುತ್ತಿವೆ. ಹೇಳುವವರು, ಕೇಳುವವರು ಯಾರು ಇಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ ಎಂಬ ಆರೋಪಗಳು ವಿದ್ಯಾರ್ಥಿಗಳ (students) ವಲಯದಿಂದ ಕೇಳಿಬರಲಾರಂಭಿಸಿದೆ.

ಇದಕ್ಕೆ ತಾಜಾ ನಿರ್ದಶನವೆಂಬಂತೆ, ಕಳೆದ ಶನಿವಾರ ಶಿವಮೊಗ್ಗ (shimoga) ನಗರದ ಹೊರವಲಯ ಮಲ್ಲಿಗೇನಹಳ್ಳಿಯ ವಾಜಪೇಯಿ ಲೇಔಟ್ ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ, ನಾಲ್ಕು ಹಾಸ್ಟೆಲ್ ಗಳ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿನ ಅವ್ಯವಸ್ಥೆಯ ವಿರುದ್ದ ರಾತ್ರೋರಾತ್ರಿ ಪ್ರತಿಭಟನೆ (protest) ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ಕೂಡ ನಡೆದಿತ್ತು.

ಹಾಸ್ಟೆಲ್ ನಲ್ಲಿನ ಊಟೋಪಚಾರ (catering) ವ್ಯವಸ್ಥೆ ಸರಿಯಿಲ್ಲ. ಬೆಡ್ ಗಳಿಲ್ಲ. ಸೋಲಾರ್ ವ್ಯವಸ್ಥೆಯಿಲ್ಲ. ಹಾಸ್ಟೆಲ್ ಪಕ್ಕದಲ್ಲಿಯೇ ಕೊಳಚೆ ನೀರು ಹರಿದು ಹೋಗುತ್ತಿದ್ದು ಸೊಳ್ಳೆ, ಕ್ರಿಮಿಕೀಟಗಳ ಹಾವಳಿ ಹೆಚ್ಚಾಗಿದೆ. ಹಾಸ್ಟೆಲ್ ಗಳಲ್ಲಿ ವಾರ್ಡನ್ ಗಳು ಸರಿಯಾಗಿರುವುದಿಲ್ಲ ಎಂಬುವುದು ಸೇರಿದಂತೆ ಹಲವು ಸಮಸ್ಯೆಗಳನ್ನು (problems) ಮುಂದಿಟ್ಟು ಪ್ರತಿಭಟನೆ ನಡೆಸಿದ್ದರು.

ಸ್ಥಳಕ್ಕಾಗಮಿಸಿದ್ದ ಇಲಾಖೆಯ ಅಧಿಕಾರಿಗಳು ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರು.ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಕೆಲ ಸೌಲಭ್ಯಗಳನ್ನು ಕಲ್ಪಿಸಿದ್ದಾರೆಂಬ ಮಾಹಿತಿಗಳು ಕೂಡ ತಿಳಿದುಬಂದಿದೆ.

ಜನಪ್ರತಿನಿಧಿಗಳ ಕೊರತೆ: ಜಿಲ್ಲಾ ಪಂಚಾಯ್ತಿ (zilla panchayat) ಹಾಗೂ ತಾಲೂಕು ಪಂಚಾಯ್ತಿಗಳಲ್ಲಿ (taluk panchayat) ಜನಪ್ರತಿನಿಧಿಗಳಿದ್ದ ವೇಳೆ, ಸರ್ಕಾರಿ ಹಾಸ್ಟೆಲ್ ಗಳಲ್ಲಿನ ಅವ್ಯವಸ್ಥೆಗಳು ಬೆಳಕಿಗೆ ಬರುತ್ತಿದ್ದವು. ಹಾಗೆಯೇ ಜನಪ್ರತಿನಿಧಿಗಳು ಕೂಡ ನಿಯಮಿತವಾಗಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು.

ಆದರೆ ಜಿಪಂ – ತಾಪಂಗಳಲ್ಲಿ ಜನಪ್ರತಿನಿಧಿಗಳಿಲ್ಲದೆ ವರ್ಷಗಳೇ ಉರುಳಿದೆ. ಜನಪ್ರತಿನಿಧಿಗಳ ಕೊರತೆಯು ಕೂಡ ಕೆಲ ಹಾಸ್ಟೆಲ್ ಗಳಲ್ಲಿ ಅಸಮರ್ಪಕ ನಿರ್ವಹಣೆ ತಲೆದೋರುವಂತೆ ಮಾಡಿದೆ. ವಿದ್ಯಾರ್ಥಿಗಳಿಗೆ ಸಿಗಬೇಕಾದ ನ್ಯಾಯಬದ್ದ ಸೌಲಭ್ಯಗಳು ದೊರಕದಂತಾಗಿದೆ ಎಂಬ ದೂರುಗಳು ಹಾಸ್ಟೆಲ್  ವಾಸಿ ವಿದ್ಯಾರ್ಥಿಗಳಿಂದ ಕೇಳಿಬರಲಾರಂಭಿಸಿದೆ.

ಭೇಟಿ ನೀಡಲಿ : ಈ ಹಿಂದೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ (District Administration, zilla Panchayat) ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ನಿಯಮಿತವಾಗಿ ದಿಢೀರ್ ಭೇಟಿ (sudden visit) ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳಿಂದ ಮಾಹಿತಿ ಪಡೆಯುತ್ತಿದ್ದರು. ಆದರೆ ಕೆಲ ಹಾಸ್ಟೆಲ್ ಗಳಿಗೆ ಹಿರಿಯ ಅಧಿಕಾರಿಗಳು ದಿಢೀರ್ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಹಾಸ್ಟೆಲ್ ವಿದ್ಯಾರ್ಥಿಗಳ ವಲಯದಿಂದ ಕೇಳಿಬರುತ್ತಿದೆ.

ಇನ್ನಾದರೂ ಆಡಳಿತ ಎಚ್ಚೆತ್ತುಕೊಳ್ಳಬೇಕು. ಸರ್ಕಾರಿ ಹಾಸ್ಟೆಲ್ ಗಳಲ್ಲಿನ ಅವ್ಯವಸ್ಥೆ ಕುರಿತಂತೆ ಕೇಳಿಬರುತ್ತಿರುವ ದೂರುಗಳ ಪರಿಹಾರಕ್ಕೆ (Redressal of complaints) ಕ್ರಮಕೈಗೊಳ್ಳಬೇಕು. ಬಡ ವರ್ಗದ ವಿದ್ಯಾರ್ಥಿಗಳಿಗೆ ನ್ಯಾಯಬದ್ದ ಸೌಲಭ್ಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

One Comment on “ಶಿವಮೊಗ್ಗ – ಅವ್ಯವಸ್ಥೆಯ ಆಗರವಾಗುತ್ತಿರುವ ಸರ್ಕಾರಿ ಹಾಸ್ಟೆಲ್ ಗಳು : ಗಮನಹರಿಸುವುದೆ ಜಿಲ್ಲಾಡಳಿತ?”

Comments are closed.