ಭದ್ರಾವತಿ (bhadravati), ಜು. 30: ಮಳೆ ಹಿನ್ನೆಲೆಯಲ್ಲಿ, ಜು. 31 ರ ಬುಧವಾರ ಭದ್ರಾವತಿ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ (holiday announcement for schools and colleges) ಮಾಡಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.
ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜು. 31 ರಂದು ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ (holiday) ಮಾಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
ಭಾರೀ ಮಳೆ (heavy rainfall) ಹಿನ್ನೆಲೆಯಲ್ಲಿ, ಈಗಾಗಲೇ ಜಿಲ್ಲೆಯ ತೀರ್ಥಹಳ್ಳಿ (thirthahalli), ಹೊಸನಗರ (hosanagara) ಹಾಗೂ ಸಾಗರ (sagar) ತಾಲೂಕುಗಳಲ್ಲಿ ಜು. 31 ರಂದು ರಜೆ ಘೋಷಣೆ ಮಾಡಲಾಗಿದೆ. ಇದೀಗ ಭದ್ರಾವತಿ ತಾಲೂಕಿನಲ್ಲಿಯೂ ರಜೆ ಘೋಷಿಸಲಾಗಿದೆ.
ವ್ಯಾಪಕ ಮಳೆ : ಜಿಲ್ಲೆಯಲ್ಲಿ ಕಡಿಮೆಯಾಗಿದ್ದ ಮುಂಗಾರು ಮಳೆಯ (monsoon rain) ತೀವ್ರತೆ ಮತ್ತೆ ಚುರುಕುಗೊಂಡಿದೆ. ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ (heavy to heavy rainfall). ಇದರಿಂದ ಕೆರೆಕಟ್ಟೆ, ನದಿಗಳು, ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

