ಶಿವಮೊಗ್ಗದಲ್ಲಿ ತುಂಗಾ ನದಿ ಪ್ರವಾಹ ಭೀತಿ : ರಾತ್ರಿಯಿಡಿ ಪಾಲಿಕೆ ಆಯುಕ್ತರ ರೌಂಡ್ಸ್!

Tunga river flood fear in Shimoga: Stay overnight for Commissioner's rounds! ಶಿವಮೊಗ್ಗದಲ್ಲಿ ತುಂಗಾ ನದಿ ಪ್ರವಾಹ ಭೀತಿ : ರಾತ್ರಿಯಿಡಿ ಪಾಲಿಕೆ ಆಯುಕ್ತರ ರೌಂಡ್ಸ್!

ಶಿವಮೊಗ್ಗ (shivamgga), ಜು. 31: ಗಾಜನೂರು ತುಂಗಾ ಜಲಾಶಯದಿಂದ (tunga dam) ಭಾರೀ ಪ್ರಮಾಣದ ನೀರು ಹೊರಬಿಟ್ಟ ಕಾರಣದಿಂದ, ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ (tunga river overflowing). ಮಂಗಳವಾರ ರಾತ್ರಿ ನದಿಯಂಚಿನ ಕೆಲ ಜನವಸತಿ ಪ್ರದೇಶಗಳ ರಸ್ತೆಗಳು ಜಲಾವೃತವಾಗಿದ್ದವು.

ಇದು ಪಾಲಿಕೆ ಆಡಳಿತದ ನಿದ್ದೆಗೆಡುವಂತೆ ಮಾಡಿತ್ತು. ರಾತ್ರಿಯಿಡಿ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ (shimoga palike commissioner) ಅವರು, ತಮ್ಮ ಅಧಿಕಾರಿ – ಸಿಬ್ಬಂದಿಗಳೊಂದಿಗೆ ನಗರದ ತುಂಗಾ ನದಿಯಂಚಿನ ತಗ್ಗು ಪ್ರದೇಶಗಳಲ್ಲಿ ಸಂಚರಿಸಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದರು. ನಿವಾಸಿಗಳಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸುತ್ತಿದ್ದುದು ಕಂಡುಬಂದಿತು.

ಈ ನಡುವೆ ಸೀಗೆಹಟ್ಟಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, 5 ಕುಟುಂಬಗಳನ್ನು ಪಾಲಿಕೆ ಆಡಳಿತ ರಾತ್ರಿಯೇ ಸ್ಥಳಾಂತರಿಸಿದೆ. ಅವರಿಗೆ ಕಾಳಜಿ ಕೇಂದ್ರಗಳಲ್ಲಿ ಊಟ, ವಸತಿ ವ್ಯವಸ್ಥೆ ಕಲ್ಪಿಸಿದೆ. ತಗ್ಗು ಪ್ರದೇಶಗಳ ಬಳಿ ಪಾಲಿಕೆ ಅಧಿಕಾರಿಗಳ ತಂಡ ನಿರಂತರವಾಗಿ ಗಸ್ತು ನಡೆಸಿ, ನಿವಾಸಿಗಳಿಗೆ ನೆರವಿನಹಸ್ತ ಕಲ್ಪಿಸುತ್ತಿದೆ.

ಆತಂಕ : ನದಿಯಂಚಿನ (riverside) ತಗ್ಗು ಪ್ರದೇಶದ ನಿವಾಸಿಗಳು ಮಂಗಳವಾರ ರಾತ್ರಿ ನಿದ್ರೆಯಿಲ್ಲದ ರಾತ್ರಿ ಕಳೆಯುವಂತಾಗಿತ್ತು. ತುಂಗಾ ನದಿಯಲ್ಲಿ (tunga river) ಭಾರೀ ಪ್ರಮಾಣದ ನೀರು ಹರಿಯುತ್ತಿದ್ದುದು ಹಾಗೂ ಕೆಲವೆಡೆ ನದಿ ನೀರಿನಿಂದ ರಸ್ತೆಗಳು ಜಲಾವೃತವಾಗಿದ್ದ ಕಾರಣದಿಂದ, ಎಲ್ಲಿ ತಮ್ಮ ಮನೆಗಳಿಗೂ ನೀರು ನುಗ್ಗುವುದೋ ಎಂಬ ಆತಂಕದಲ್ಲಿಯೇ ಕಾಲ ಕಳೆಯುವಂತಾಗಿತ್ತು.

ಹೆಚ್ಚಳ : ಬುಧವಾರ ಬೆಳಿಗ್ಗೆಯ ಮಾಹಿತಿಯಂತೆ ಗಾಜನೂರು ತುಂಗಾ ಜಲಾಶಯದಿಂದ ಸುಮಾರು 82 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಅಪಾಯದ ಮಟ್ಟ (tunga river flood) ಮೀರಿ ಹರಿಯುತ್ತಿದೆ. ಡ್ಯಾಂನಿಂದ ಹೊರಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾದರೆ, ನಗರದಂಚಿನ ತಗ್ಗು ಪ್ರದೇಶಗಳು ಜಲಾವೃತವಾಗಲಿವೆ.

*** ‘ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಕಾರಣದಿಂದ ನಗರದ ನದಿಯಂಚಿನ ಪ್ರದೇಶಗಳಲ್ಲಿ ವ್ಯಾಪಕ ಕಟ್ಟೆಚ್ಚರವಹಿಸಲಾಗಿದೆ. ಈಗಾಗಲೇ ಸೀಗೆಹಟ್ಟಿ ಬಡಾವಣೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 5 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ’ ಎಂದು ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ (shimoga palike commissioner dr kavitha yogappanavar) ತಿಳಿಸಿದ್ದಾರೆ.

ಬುಧವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಮಂಗಳವಾರ ತಡರಾತ್ರಿಯವರೆಗೂ ನಗರದ ತಗ್ಗು ಪ್ರದೇಶಗಳಲ್ಲಿ ತಾವು ಸೇರಿದಂತೆ ಪಾಲಿಕೆ ಅಧಿಕಾರಿ-ಸಿಬ್ಬಂದಿಗಳ ತಂಡ ಸಂಚರಿಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದವು. ನದಿ ನೀರಿನ ಹರಿವು ಕಡಿಮೆಯಾಗುವವರೆಗೂ ಎಚ್ಚರದಿಂದ ಇರುವಂತೆ ನದಿಯಂಚಿನ ಬಡಾವಣೆ ನಿವಾಸಿಗಳಿಗೆ ಸೂಚನೆ ನೀಡಲಾಗುತ್ತಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಪಾಲಿಕೆ ಆಡಳಿತ ಸಕಲ ಸಜ್ಜಾಗಿದೆ’ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →