ಭದ್ರಾ ಜಲಾಶಯ ಸುತ್ತಮುತ್ತ ನಿಷೇಧಾಜ್ಞೆ ಜಾರಿ!

Prohibition around Bhadra Reservoir! ಭದ್ರಾ ಡ್ಯಾಂ ಸುತ್ತಮುತ್ತ ನಿಷೇಧಾಜ್ಞೆ!

ಶಿವಮೊಗ್ಗ (shivamogga), ಆ. 1: ಭಾರೀ ಮಳೆಗೆ, ಭದ್ರಾ ಜಲಾಶಯ (bhadra dam) ಮೈದುಂಬಿ ಹರಿಯುತ್ತಿದೆ. ಮತ್ತೊಂದೆಡೆ, ಡ್ಯಾಂ ವೀಕ್ಷಣೆ ಹಾಗೂ ಬಾಗಿನ ಅರ್ಪಿಸಲು ಆಗಮಿಸುವವರ ಸಂಖ್ಯೆಯು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibition) ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

‘ಜಲಾಶಯ ಬಳಿ ಜನಜಂಗುಳಿ (crowd) ಉಂಟಾಗುತ್ತಿರುವುದರಿಂದ ಸುರಕ್ಷತೆ ಕಾಯ್ದುಕೊಳ್ಳುವುದು ಕಷ್ಟಕರವಾಗಿ ಪರಿಣಮಿಸುತ್ತಿದೆ. ಮತ್ತೊಂದೆಡೆ ಮಳೆಯ ತೀವ್ರತೆ (heavy rainfall) ಹೆಚ್ಚಾಗುವ ಮುನ್ಸೂಚನೆಯಿದೆ. ಈ ಕಾರಣದಿಂದ 1-8-2024 ರಿಂದ 31-8-2024 ರವರೆಗೆ ಭಾರತೀಯ ನಾಗರೀಕ ಸುರಕ್ಷತಾ ಸಂಹಿತೆಯಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ (shimoga dc) ಗುರುದತ್ ಹೆಗಡೆ ಅವರು ತಿಳಿಸಿದ್ದಾರೆ.

ನಿಬಂಧನೆಗಳು : ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಭದ್ರಾ ಎಡ ಮತ್ತು ಬಲ ದಂಡೆಯಲ್ಲಿ ನೀರಿಗೆ ಇಳಿಯುವಂತಿಲ್ಲ. ಪೋಟೋ ತೆಗೆಯುವಂತಿಲ್ಲ. ಜಲಾಶಯದ (reservoir) ಮೇಲ್ಭಾಗಕ್ಕೆ ತೆರಳುವುದನ್ನು ನಿರ್ಬಂಧಿಸಲಾಗಿದೆ.

ಗೇಟ್ ಬಳಿ ಗುಂಪುಗೂಡುವಂತಿಲ್ಲ. ಡ್ಯಾಂ ಸೆಕ್ಯುರಿಟಿ ಇತರೆ ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಮಾಡುವಂತಿಲ್ಲ ಎಂದು ನಿಬಂಧನೆ ವಿಧಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →