ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭೂ ಕುಸಿತ!

land slides in different parts of thirthahalli taluk! ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭೂ ಕುಸಿತ!

ತೀರ್ಥಹಳ್ಳಿ (thirthahalli), ಆ. 2: ಭಾರೀ ಮಳೆಯಿಂದ (heavy rainfall) ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಇತ್ತೀಚೆಗೆ ಭೂ ಕುಸಿತ (land slides) ಉಂಟಾಗಿರುವ ಘಟನೆಗಳು ವರದಿಯಾಗಿವೆ.

ದೇವಂಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲುಕೂಡಿಗೆಯ ಬೆಕ್ಕನೂರು ಗ್ರಾಮದ ಮಂಜುನಾಥ್ ಎಂಬುವರ ಮನೆಯ ಪಕ್ಕದಲ್ಲಿಯೇ ಗುಡ್ಡವೊಂದು ಕುಸಿದಿದೆ. ಗುಡ್ಡದ ಮಣ್ಣು ಮನೆಯ ಕೊಟ್ಟಿಗೆ ಸೇರಿದಂತೆ ಸುತ್ತಮುತ್ತಲು ಆವರಿಸಿದೆ.

ಮತ್ತೊಂದೆಡೆ, ಮೇಗರವಳ್ಳಿ ಸಮೀಪ ಉಡುಪಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ಧಾರಿ (national highway) ಬದಿಯಲ್ಲಿ ಭೂ ಕುಸಿತವಾಗಿದೆ (land slide). ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ಸಂಬಂಧಿಸಿದ ಇಲಾಖೆಯುವರು ಕುಸಿತವಾದ  ಸ್ಥಳದಲ್ಲಿ ಕುಸಿತ ತಡೆ ನಿಟ್ಟಿನಲ್ಲಿ ತಾತ್ಕಾಲಿಕ ಪರಿಹಾರ ಕ್ರಮಕೈಗೊಂಡಿದ್ಧಾರೆ ಎಂದು ಹೇಳಲಾಗಿದೆ.

ತಾಲೂಕಿನ ಸಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುನ್ನಿಕೇವಿ ಸೇತುವೆಯು ಮಳೆಯಿಂದ ಅಪಾಯಕಾರಿ ಸ್ಥಿತಿಗೆ ತಲುಪಿದ್ದು, ಕುಸಿದು ಬೀಳುವ ಸಾಧ್ಯತೆಯಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →