ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 23 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ!

The accused who was involved in 23 house theft cases who was absconding without attending the court hearing was arrested! ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 23 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ!

ಶಿವಮೊಗ್ಗ (shivamoogga), ಆ. 2: ನ್ಯಾಯಾಲಯದ (court) ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 23 ಮನೆಗಳ್ಳತನ ಕೃತ್ಯಗಳಲ್ಲಿ (house burglary) ಭಾಗಿಯಾಗಿದ್ದ ಆರೋಪಿಯನ್ನು, ಶಿವಮೊಗ್ಗ ದೊಡ್ಡಪೇಟೆ ಠಾಣೆ (shimoga doddapete police station) ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.

ಶಿವಮೊಗ್ಗ ಅಶೋಕ ನಗರ ಬಡಾವಣೆ ನಿವಾಸಿ ಇಬ್ರಾಹಿಂ ಯಾನೆ ಇಬ್ಬು (30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆಗಸ್ಟ್ 1 ರಂದು ಆರೋಪಿಯನ್ನು ಪೊಲೀಸರು ಬಂಧಿಸಿ, 2 ನೇ ಜೆಎಂಎಫ್’ಸಿ ನ್ಯಾಯಾಲಯದ (shimoga jmfc court) ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ (judical custody) ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಸಾಲುಸಾಲು ಕೇಸ್! : ಆರೋಪಿ (accused) ವಿರುದ್ದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 11, ವಿನೋಬನಗರ ಠಾಣೆಯಲ್ಲಿ (vinobanagar police station) 3, ತುಂಗಾನಗರ ಠಾಣೆಯಲ್ಲಿ (tunganagara police station) 2, ಕುಂಸಿ ಠಾಣೆಯಲ್ಲಿ (kumsi police station) 1, ಸಾಗರ ಗ್ರಾಮಾಂತರ ಠಾಣೆಯಲ್ಲಿ (sagar rural police station) 5 ಹಾಗೂ ಟೌನ್ ಠಾಣೆಯಲ್ಲಿ (sagar town police station) 1 ಪ್ರಕರಣ ಸೇರಿದಂತೆ ಒಟ್ಟಾರೆ 23 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಂಬಂಧ ದೂರುಗಳು (fir) ದಾಖಲಾಗಿದ್ದವು!

ಆದರೆ ಆರೋಪಿಯು ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ (court) ಹಾಜರಾಗದೆ ತಲೆಮರೆಸಿಕೊಂಡಿದ್ದ (absconding ). ನ್ಯಾಯಾಲಯವು ಆರೋಪಿಯ ಬಂಧನಕ್ಕೆ ವಾರೆಂಟ್ (arrest warrant) ಹೊರಡಿಸಿತ್ತು.

ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್ (inspector) ರವಿ ಪಾಟೀಲ್, ಮತ್ತವರ ಸಿಬ್ಬಂದಿಗಳಾದ ಸಿಹೆಚ್’ಸಿ ರುದ್ರೇಶ್, ಮಂಜಪ್ಪ, ಸಿಪಿಸಿಗಳಾದ ರವೀಂದ್ರ ಪ್ರಸಾದ್, ಮಂಜುನಾಥ್ ನಾಯ್ಕ್ ಅವರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ. ಸದರಿ ತಂಡದ ಕಾರ್ಯವನ್ನು ಎಸ್ಪಿ *(shimoga sp) ಜಿ.ಕೆ.ಮಿಥುನ್ ಕುಮಾರ್ ಅವರು ಶ್ಲಾಘಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →