ಕಣ್ಮನ ಸೆಳೆಯುತ್ತಿರುವ ಜೋಗ ಜಲಪಾತದ ಜಲರಾಶಿಯ ಸೌಂದರ್ಯ!

The eye-catching beauty of the water body of Joga Falls! ಕಣ್ಮನ ಸೆಳೆಯುತ್ತಿರುವ ಜೋಗ ಜಲಪಾತದ ಜಲರಾಶಿಯ ಸೌಂದರ್ಯ!

ಸಾಗರ, ಆ. 3: ಲಿಂಗನಮಕ್ಕಿ ಜಲಾಶಯದಿಂದ (linganamakki dam) ಭಾರೀ ಪ್ರಮಾಣದ ನೀರು ಹೊರಬಿಟ್ಟಿರುವ (outflow) ಕಾರಣದಿಂದ, ವಿಶ್ವವಿಖ್ಯಾತ ಜೋಗ ಜಲಪಾತ (world famous jogfalls) ಜಲಧಾರೆಯಿಂದ ಭೋರ್ಗರೆಯಲಾರಂಭಿಸಿದೆ. ಪ್ರವಾಸಿಗರ (tourists) ಕಣ್ಮನ ಸೆಳೆಯುತ್ತಿದೆ.

ಶನಿವಾರ ಲಿಂಗನಮಕ್ಕಿ ಜಲಾಶಯದಿಂದ (reservoir) ಸುಮಾರು 58 ಸಾವಿರ ಕ್ಯೂಸೆಕ್ ನೀರನ್ನು, ಹೊರ ಹರಿಸಲಾಗುತ್ತಿದೆ. ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರ ಬಿಟ್ಟಿರುವ ಕಾರಣದಿಂದ, ಜೋಗ ಜಲಪಾತದ (jogfalls) ಜಲಧಾರೆಯ ವೈಭೋಗ ಮತ್ತಷ್ಟು ಕಳೆಗಟ್ಟಿದೆ.

ವೀಕೆಂಡ್ (weekend) ವೇಳೆಯಲ್ಲಿಯೇ ಜೋಗ ಜಲಪಾತ ಕಳೆಗಟ್ಟಿರುವುದರಿಂದ ಭಾರೀ ದೊಡ್ಡ ಸಂಖ್ಯೆಯ ಪ್ರವಾಸಿಗರು ಜೋಗದತ್ತ (jog) ದೌಡಾಯಿಸುತ್ತಿದ್ದಾರೆ. ಶನಿವಾರ ಸಾವಿರಾರು ಪ್ರವಾಸಿಗರು ಫಾಲ್ಸ್ ಗೆ (falls) ಭೇಟಿ ನೀಡಿದ್ದರು. ಭಾನುವಾರ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

‘ಲಿಂಗನಮಕ್ಕಿ ಡ್ಯಾಂನಿಂದ (linganamakki reservoir) ಭಾರೀ ಪ್ರಮಾಣದ ನೀರು ಹೊರಬಿಟ್ಟಿರುವ ಕಾರಣದಿಂದ, ಜೋಗಕ್ಕೆ ಹೊಸ ಕಳೆ ಬಂದಿದೆ. ಅಮೆರಿಕಾದ ನಯಾಗಾರ ಜಲಪಾತದಂತೆ (america niagara falls) ಭೋರ್ಗರೆಯುತ್ತಿದೆ. ಜೋಗದ ಸಿರಿ ಅವರ್ಣನೀಯವಾಗಿದೆ’ ಎಂದು ಕೆಲ ಪ್ರವಾಸಿಗರು ಸಂತಸ ವ್ಯಕ್ತಪಡಿಸುತ್ತಾರೆ.

ಶರಾವತಿ ಕಣಿವೆ (sharavati valley) ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ (heavy rainfall). ಇದರಿಂದ ಶರಾವತಿ ನದಿ (sharavati river) ಉಕ್ಕಿ ಹರಿಯುತ್ತಿದೆ. ಮತ್ತೊಂದೆಡೆ, ಲಿಂಗನಮಕ್ಕಿ ಡ್ಯಾಂನಿಂದ (linganamakki dam) ನೀರು ಹೊರಬಿಟ್ಟಿರುವ ಕಾರಣದಿಂದ, ಡ್ಯಾಂ ಕೆಳಭಾಗದಲ್ಲಿ ಶರಾವತಿ ನದಿ ನೀರಿನ ಹರಿವು (sharavati river flowing) ಮತ್ತಷ್ಟು ಹೆಚ್ಚಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಸೃಷ್ಟಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →