ಅನಾರೋಗ್ಯದಿಂದ ಬಳಲುತ್ತಿದ್ದ ಲಯನ್ ಸಫಾರಿಯ ಸಿಂಹ ಸಾವು!

The lion of Lion Safari who was sick died! ಅನಾರೋಗ್ಯದಿಂದ ಬಳಲುತ್ತಿದ್ದ ಲಯನ್ ಸಫಾರಿಯ ಸಿಂಹ ಸಾವು!

ಶಿವಮೊಗ್ಗ (shivamogga), ಆ. 5: ವಯೋ ಸಹಜ ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ, ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿನ (thyavarekoppa tiger and lion safari) ಗಂಡು ಸಿಂಹವೊಂದು ಸೋಮವಾರ ಮೃತಪಟ್ಟ ಘಟನೆ ನಡೆದಿದೆ.

18 ವರ್ಷ ವಯೋಮಾನದ ಆರ್ಯ ಮೃತಪಟ್ಟ ಸಿಂಹ (arya is a dead lion) ಎಂದು ಗುರುತಿಸಲಾಗಿದೆ. ಇದು ಲಯನ್ ಸಫಾರಿಯಲ್ಲಿ (safari) ಅತ್ಯಂತ ಹಿರಿಯ ಸಿಂಹವಾಗಿತ್ತು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಆಹಾರ ಸೇವಿಸುವುದನ್ನು ನಿಲ್ಲಿಸಿತ್ತು. ಸಫಾರಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದೆ. ನಿಯಮಾನುಸಾರ ಅರಣ್ಯ ಇಲಾಖೆಯು ಸಿಂಹದ ಮೃತದೇಹವನ್ನು ಅಂತ್ಯ ಸಂಸ್ಕಾರ ನೆರವೇರಿಸಿದೆ.

2008 ರಲ್ಲಿ ಮೈಸೂರು ಮೃಗಾಲಯದಿಂದ (mysore safari) ಆರ್ಯ ಸಿಂಹವನ್ನು (lion) ಲಯನ್ ಸಫಾರಿಗೆ ತರಲಾಗಿತ್ತು. ಅಕರ್ಷಣೆಯ ಕೇಂದ್ರವಾಗಿತ್ತು. ಪ್ರಸ್ತುತ ಸಫಾರಿಯಲ್ಲಿ ನಾಲ್ಕು ಸಿಂಹಗಳಿವೆ (lions).

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →