ಶಿವಮೊಗ್ಗ ವಿಭಾಗದ ಕೆಎಸ್ಆರ್’ಟಿಸಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

Invitation to apply for the post of driver on outsourcing basis in KSRTC Shimoga Division ಶಿವಮೊಗ್ಗ ವಿಭಾಗದ ಕೆಎಸ್ಆರ್’ಟಿಸಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಆ. 6: ಶಿವಮೊಗ್ಗ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (shimoga ksrtc divison) ಯಲ್ಲಿ ಖಾಲಿಯಿರುವ ಚಾಲಕ ಹುದ್ದೆಗಳ (driver post) ನೇಮಕಾತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ (shimoga), ಭದ್ರಾವತಿ (bhadravati), ಹೊನ್ನಾಳ್ಳಿ (honnalli), ಸಾಗರ (sagar), ಶಿಕಾರಿಪುರದಲ್ಲಿ (shikaripur) ಕಾರ್ಯನಿರ್ವಹಿಸಲು ಹೊರಗುತ್ತಿಗೆ (outsource) ಆಧಾರದ ಮೇಲೆ ಸದರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ, ಅರ್ಹ ಚಾಲಕರು (drivers) ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ದಾಖಲಾತಿಗಳು : ಅರ್ಜಿಯೊಂದಿಗೆ (application) ಈ ಮುಂದಿನ ದಾಖಲಾತಿಗಳನ್ನು (documents) ಕಡ್ಡಾಯವಾಗಿ ಸಲ್ಲಿಸಬೇಕು. ‘ಆಧಾರ್ ಕಾರ್ಡ್ (aadhar card), ಡ್ರೈವಿಂಗ್ ಲೈಸೆನ್ಸ್ – driving licence (ಹೆವಿ ಲೈಸೈನ್ಸ್ ವಿತ್ ಬ್ಯಾಡ್ಜ್ ಹೆಚ್.ಪಿ.ವಿ), ಮೆಡಿಕಲ್ ಫಿಟ್ನೆಸ್ ಪ್ರಮಾಣಪತ್ರ (medical fitness certificate),

7 ನೇ ತರಗತಿ ಮೇಲ್ಪಟ್ಟ ಅಂಕಪಟ್ಟಿ (marks card), ಶಾಲಾ ವರ್ಗಾವಣೆ ಪ್ರಮಾಣಪತ್ರ (school tc), ಬ್ಯಾಂಕ್ ದಾಖಲಾತಿ (bank passbook), ಜಾತಿ ಪ್ರಮಾಣ ಪತ್ರ (cast certificate), ವಾಸ ಸ್ಥಳ ದೃಢೀಕರಣ ಪ್ರಮಾಣಪತ್ರ (Proof of Residence) ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ 0821 – 3588801, 9110692229, 8618943513 ಗೆ ಸಂರ್ಪಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →