ಬೆಂಕಿಗಾಹುತಿಯಾದ ಭಟ್ಕಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ : ತಪ್ಪಿದ ಭಾರೀ ಅನಾಹುತ!

KSRTC bus which was going from Bhatkal to Bangalore caught fire: a huge disaster! ಬೆಂಕಿಗಾಹುತಿಯಾದ ಭಟ್ಕಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ : ತಪ್ಪಿದ ಭಾರೀ ಅನಾಹುತ!

ಶಿವಮೊಗ್ಗ, ಆ. 6:  ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ (ksrtc bus) ವೊಂದು ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಸಾಗರದ ಎಲ್.ಬಿ. ಕಾಲೇಜ್ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ (north west karnataka transport corporation) ಸದರಿ ಬಸ್ ಸೇರಿದ್ದಾಗಿದೆ. ಭಟ್ಕಳದಿಂದ (bhatkal) ಹೊನ್ನಾವರ (honnavara), ಸಾಗರ ಮಾರ್ಗವಾಗಿ ಬೆಂಗಳೂರಿಗೆ (bengaluru) ತೆರಳುತ್ತಿತ್ತು (bhatkal – bengaluru bus). ಸುಮಾರು 14 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಬಸ್ ನಲ್ಲಿ (bus) ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ (driver) ಬಸ್ ನಿಲ್ಲಿಸಿದ್ದು, ಪ್ರಯಾಣಿಕರೆಲ್ಲರೂ (travelers) ಹೊರ ಓಡಿ ಬಂದಿದ್ದಾರೆ. ಕ್ಷಣಮಾತ್ರದಲ್ಲಿಯೇ ಬಸ್ ಬೆಂಕಿಯಿಂದ ಹೊತ್ತಿ ಉರಿಯಲಾರಂಭಿಸಿದೆ (ksrtc bus caught fire) ಎಂದು ಹೇಳಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ (Fire Brigade) ಸಿಬ್ಬಂದಿಗಳು ಬಸ್ ಗೆ ಹೊತ್ತಿದ್ದ ಬೆಂಕಿ ನಂದಿಸಿದ್ದಾರೆ. ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು (police) ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →