ನವ ದಂಪತಿ ಪ್ರಕರಣ : ವಧುವಿನ ಬೆನ್ನಲ್ಲೇ ವರನೂ ಸಾವು!

The case of a newly married couple fighting case : the groom also died after the bride! ಮಚ್ಚಿನಲ್ಲಿ ಹೊಡೆದಾಡಿಕೊಂಡ ನವ ದಂಪತಿ ಪ್ರಕರಣ : ವಧುವಿನ ಬೆನ್ನಲ್ಲೇ ವರನೂ ಸಾವು

ಕೆಜಿಎಫ್ (ಕೋಲಾರ), ಆ. 8: ಮದುವೆ ದಿನದಂದೆ (marriage day) ಮಚ್ಚಿನಲ್ಲಿ ಹೊಡೆದಾಡಿಕೊಂಡ ನವ ದಂಪತಿ ಪ್ರಕರಣದಲ್ಲಿ, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವರನೂ (groom) ಕೂಡ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಘಟನೆ ನಡೆದ ಬುಧವಾರದಂದು ವಧು (bride) ಲಿಖಿತಶ್ರೀ (20) ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವರ ನವೀನ್ (28) ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ (bengaluru) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರ ಮೃತಪಟ್ಟಿದ್ದಾರೆ.

ಇದರಿಂದ ಪ್ರೀತಿಸಿ ಮದುವೆಯಾಗಿದ್ದ (love marriage) ನವ ದಂಪತಿಯ ಪ್ರಕರಣ ದುರಂತದಲ್ಲಿ ಕೊನೆಯಾಗಿದೆ. ವಧು-ವರರ ಎರಡೂ ಕುಟುಂಬಗಳಲ್ಲಿ ಶೋಕ ಮಡುಗಟ್ಟುವಂತೆ ಮಾಡಿದೆ.

ಏನೀದು ಘಟನೆ? : ಲಿಖಿತಶ್ರೀ ಹಾಗೂ ನವೀನ್ ಕುಮಾರ್ (30) ಪರಸ್ಪರ ಪ್ರೀತಿಸುತ್ತಿದ್ದರು. ಆ. 7 ರ ಬುಧವಾರ ಬೆಳಿಗ್ಗೆ ಕೆಜಿಎಫ್ (kgf) ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿರುವ ವರ ನವೀನ್ ಕುಮಾರ್ ಅವರ ಅಕ್ಕನ ಮನೆಯಲ್ಲಿ ಇವರಿಬ್ಬರ ವಿವಾಹ (marriage) ನೆರವೇರಿತ್ತು. ಮದುವೆಯ ಸಕಲ ರೀತಿ-ರಿವಾಜುಗಳು ನೆರವೇರಿದ್ದವು. ನವ ದಂಪತಿಗಳು ಖುಷಿಖುಷಿಯಿಂದಲೇ ಇದ್ದರು.

ವಿವಾಹದ ನಂತರ ಅದೇ ಗ್ರಾಮದಲ್ಲಿರುವ ವರನ ದೊಡ್ಡಪ್ಪನ ಮನೆಯಲ್ಲಿ ಇಬ್ಬರು ತಂಗಿದ್ದರು. ಕೋಣೆ ಸೇರಿಕೊಂಡಿದ್ದ ಇಬ್ಬರು,  ದಿಢೀರ್ ಆಗಿ ಸಂಜೆ ವೇಳೆ ಮಚ್ಚಿನಿಂದ ಪರಸ್ಪರ ಹೊಡೆದಾಡಿಕೊಂಡಿದ್ದರು. ನವ ದಂಪತಿಗಳ (newly married couple) ಚೀರಾಟ ಗಮನಿಸಿ ಮನೆಯಲ್ಲಿದ್ದವರು ತಕ್ಷಣವೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ವಧು ಲಿಖಿತಶ್ರೀ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಳು. ಮತ್ತೊಂದೆಡೆ, ಗಂಭೀರ ಸ್ಥಿತಿಯಲ್ಲಿದ್ದ ವರ ನವೀನ್ ಕುಮಾರ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಡೀ ಪ್ರಕರಣ ನಿಗೂಢವಾಗಿ ಪರಿಣಮಿಸಿದೆ. ದಂಪತಿ ನಡುವೆ ಕಲಹಕ್ಕೆ ಕಾರಣವೇನು? ಇದರ ಹಿಂದೆ ಬೇರೆ ಏನಾದರೂ ಕೈವಾಡವಿದೆಯೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಪೊಲೀಸರ ತನಿಖೆಯಿಂದ ಉತ್ತರ ದೊರಕಬೇಕಾಗಿದೆ. ಈ ಸಂಬಂಧ ಕೆಜಿಎಫ್ ನ ಅಂಡರ್‌ಸನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →