ರಾತ್ರಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ, ಬೆಳಿಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆ!

A woman who went missing with her two children at night was found dead in a well in the morning! ರಾತ್ರಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಬೆಳಿಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆ

ಹೊಸನಗರ (hosanagara), ಆ. 9: ಮನೆಯಿಂದ ಕಣ್ಮರೆಯಾಗಿದ್ದ (missing) ಮಹಿಳೆ ಹಾಗೂ ಇಬ್ಬರು ಮಕ್ಕಳು, ಮನೆಯೊಂದರ ಸಮೀಪದ ಬಾವಿಯಲ್ಲಿ (well) ಶವವಾಗಿ ಪತ್ತೆಯಾದ ಘಟನೆ, ಶಿವಮೊಗ್ಗ (shimoga) ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಕೈ ಸಮೀಪದ ಚಂಪಾಪುರ ಗ್ರಾಮದಲ್ಲಿ ನಡೆದಿದೆ.

ರಾಜೇಶ್ ಎಂಬುವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತಪಟ್ಟವರೆಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಮಹಿಳೆಯು ಇಬ್ಬರು ಮಕ್ಕಳೊಂದಿಗೆ ಮನೆಯಿಂದ (house) ಹೊರಹೋಗಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ. ಕುಟುಂಬದವರು ಎಲ್ಲೆಡೆ ಹುಡುಕಿದರೂ ಸುಳಿವು ಲಭ್ಯವಾಗಿರಲಿಲ್ಲ.

ಶುಕ್ರವಾರ ಬೆಳಿಗ್ಗೆ ನೆರೆಮನೆಯ ಸಮೀಪದ ಬಾವಿಯಲ್ಲಿ ತಾಯಿ ಹಾಗೂ ಮಕ್ಕಳ (mother and two childrens) ಶವಗಳು ತೇಲುತ್ತಿರುವುದು ಕಂಡುಬಂದಿದೆ. ಮೃತದೇಹಗಳನ್ನು (dead bodies) ಬಾವಿಯಿಂದ ಮೇಲಕ್ಕೇತ್ತಲಾಗಿದೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆ ಶಂಕೆ (Suspect suicide) ವ್ಯಕ್ತಪಡಿಸಲಾಗಿದೆ. ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆ (ngara police station) ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →