ಕೊಲೆ ಪ್ರಕರಣ : ಶಿವಮೊಗ್ಗದ 7 ಯುವಕರಿಗೆ ಜೀವಾವಧಿ ಶಿಕ್ಷೆ!

Murder case : Life imprisonment for 7 youths of Shimoga! ಕೊಲೆ ಪ್ರಕರಣ : ಶಿವಮೊಗ್ಗದ 7 ಯುವಕರಿಗೆ ಜೀವಾವಧಿ ಶಿಕ್ಷೆ!

ಶಿವಮೊಗ್ಗ, ಆ. 10: ಕೊಲೆ ಪ್ರಕರಣವೊಂದರಲ್ಲಿ (murder case) 7 ಯುವಕರಿಗೆ ಜೀವಾವಧಿ ಶಿಕ್ಷೆ (life imprisonment) ವಿಧಿಸಿ ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗ (shimoga) ಆರ್.ಎಂ.ಎಲ್ ನಗರ ನಿವಾಸಿ ಲತೀಫ್ (20), ಟಿಪ್ಪುನಗರದ ಪರ್ವೇಜ್ ಯಾನೆ ಪರ್ರು (23), ಸೈಯದ್ ಜೀಲಾನ್ ಯಾನೆ ಜೀಲಾ (19), ಜಾಫರ್ ಸಾಧಿಕ್ (29), ಮಹಮ್ಮದ್ ಶಾಬಾಜ್ ಯಾನೆ ಶಾಬು (19),

ಅಬ್ದುಲ್ ಶಾಬೀರ್ ಯಾನೆ ಶಾಬೀರ್ (24) ಹಾಗೂ ತಸ್ಲೀಂ ಯಾನೆ ಮೊಹಮ್ಮದ್ ಯೂಸೂಫ್ (26) ಶಿಕ್ಷೆಗೊಳಗಾದ ಯುವಕರೆಂದು ಗುರುತಿಸಲಾಗಿದೆ. ಸದರಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಸೈಯದ್ ರಾಜೀಕ್ ಯಾನೆ ರಾಜಿಕ್ (28) ಎಂಬಾತ ಮೃತಪಟ್ಟಿದ್ದಾನೆ.

ಅಪರಾಧಿಗಳಿಗೆ ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ ಕೊಲೆಗೀಡಾದ ವ್ಯಕ್ತಿಯ ಪತ್ನಿಗೆ 30 ಸಾವಿರ ರೂ. ನೀಡುವಂತೆ ನ್ಯಾಯಾಧೀಶರಾದ (judge) ಪಲ್ಲವಿ ಬಿ. ಆರ್. ಅವರು 9-8-2024 ರಂದು ನೀಡಿದ ತೀರ್ಪಿನಲ್ಲಿ (judgement) ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪಿ.ಓ.ಪುಷ್ಪಾ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಗಾಂಜಾ ಮಾರಾಟದ (ganja) ವಿಚಾರಕ್ಕೆ ಸಂಬಂಧಿಸಿದಂತೆ, 18-9-2021 ರಂದು ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ (shimoga tunganagara police station) ವ್ಯಾಪ್ತಿಯ ಟಿಪ್ಪುನಗರ 7 ನೇ ಮುಖ್ಯ ರಸ್ತೆ 4 ನೇ ಕ್ರಾಸ್ ಸಮೀಪ, ಅಣ್ಣಾನಗರ ನಿವಾಸಿ ಇರ್ಫಾನ್ ಯಾನೆ ಟ್ವಿಸ್ಟ್ ಇರ್ಫಾನ್ ಎಂಬ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ (Murder by stabbing) ಮಾಡಲಾಗಿತ್ತು.

ಇನ್ಸ್’ಪೆಕ್ಟರ್ (inspector) ಎಂ. ದೀಪಕ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ಹತ್ಯೆಯಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (chargesheet) ದಾಖಲಿಸಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →