ಗೌರಿ-ಗಣೇಶ, ಈದ್ ಮಿಲಾದ್ ಹಬ್ಬ : ಶಿವಮೊಗ್ಗ ರೌಡಿಗಳಿಗೆ ಪೊಲೀಸರ ಖಡಕ್ ವಾರ್ನಿಂಗ್!

Gauri-Ganesha festival : Police warning to Shimoga rowdies! ಗೌರಿ-ಗಣೇಶ ಹಬ್ಬ : ಶಿವಮೊಗ್ಗ ರೌಡಿಗಳಿಗೆ ಪೊಲೀಸರ ಖಡಕ್ ವಾರ್ನಿಂಗ್!

ಶಿವಮೊಗ್ಗ, ಆ. 10: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ (gowri ganesha and eid milad festival) ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು, ರೌಡಿ ಶೀಟರ್ ಗಳ (rowdy sheeters) ಪರೇಡ್ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಆ. 9 ರಂದು ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ (shimoga dar ground) ಪರೇಡ್ ನಡೆಸಲಾಗಿದ್ದು, 110 ಜನ ರೌಡಿಗಳು (rowdies) ಹಾಜರಿದ್ದರು. ಜಿಲ್ಲಾ ರಕ್ಷಣಾಧಿಕಾರಿ (sp) ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ (asp) ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ (dysp) ಸುರೇಶ್, ಬಾಬು ಅಂಜನಪ್ಪ ಉಪಸ್ಥಿತರಿದ್ದರು.

ಸೂಚನೆ : ವಾರದಲ್ಲಿ ಎರಡು ಬಾರಿ ಸಂಬಂಧಿಸಿದ ಪೊಲೀಸ್ ಠಾಣೆಗೆ (police station) ಕಡ್ಡಾಯವಾಗಿ ಹಾಜರಾಗಬೇಕು. ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದ್ದು, ಯಾವುದಾದರು ಕಾನೂನುಬಾಹಿರ ಕೃತ್ಯಗಳಲ್ಲಿ (criminal activities) ಭಾಗಿಯಾಗಿದ್ದು ಕಂಡುಬಂದರೆ ಗಡಿಪಾರುಗೊಳಿಸುವುದು, ಗೂಂಡಾ ಕಾಯ್ದೆಯಡಿ (goonda act) ಕೇಸ್ ದಾಖಲಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ (police warrning) ನೀಡಿದ್ದಾರೆ.

ಸಹಚರರ ಜೊತೆಗೆ ಗುಂಪುಗೂಡುವುದು, ರಾತ್ರಿ ವೇಳೆ ಅನಾವಶ್ಯಕವಾಗಿ ಸುತ್ತಾಡುವುದು ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು. ಆದಾಯದ ಮೂಲಗಳ ವಿವರ ಸಂಗ್ರಹಿಸಲಾಗುವುದು. ಹೇರ್ ಕಟ್ಟಿಂಗ್, ಶೇವಿಂಗ್ ಮಾಡಿಸಿಕೊಂಡು ಶಿಸ್ತಾಗಿ ಇರಬೇಕು ಎಂದು ರೌಡಿಗಳಿಗೆ ತಾಕೀತು ಮಾಡಲಾಗಿದೆ.

ಕಾನೂನುಗಳನ್ನು ಗೌರವಿಸಿ ಪಾಲಿಸಿ. ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಿ. ಇದಕ್ಕೆ ಪೊಲೀಸ್ ಇಲಾಖೆಯಿಂದ (police dept) ನೆರವು ನೀಡಲಾಗುವುದು. ಒಂದು ವೇಳೆ ಸಮಾಜದ ಶಾಂತಿ – ಸುವ್ಯವಸ್ಥೆಗೆ ಭಂಗ ತರುವ ಕೃತ್ಯಗಳಲ್ಲಿ (rowdyism) ಭಾಗಿಯಾದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →