ವಾಹನಗಳಲ್ಲಿ ಎಲ್ಇಡಿ ಲೈಟ್ ಅಳವಡಿಕೆ ತೆರವು ಕಾರ್ಯಾಚರಣೆ : ಸಾವಿರಾರು ಕೇಸ್ ದಾಖಲು!

Installation of LED light in vehicles clearance operation: Thousands of cases registered! ವಾಹನಗಳಲ್ಲಿ ಎಲ್ಇಡಿ ಲೈಟ್ ಅಳವಡಿಕೆ ತೆರವು ಕಾರ್ಯಾಚರಣೆ : ಸಾವಿರಾರು ಕೇಸ್ ದಾಖಲು!

ಶಿವಮೊಗ್ಗ (shivamogga), ಆ. 10: ವಾಹನಗಳಲ್ಲಿ ನಿಯಮಕ್ಕೆ ವಿರುದ್ದವಾಗಿ ಎಲ್ಇಡಿ ಲೈಟ್ (led lights on vehicles) ಅಳವಡಿಕೆ ವಿರುದ್ದ, ಶಿವಮೊಗ್ಗ ಜಿಲ್ಲಾ ಪೊಲೀಸರು (shimoga district police) ವಿಶೇಷ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ಈಗಾಗಲೇ ಸಾವಿರಾರು ಕೇಸ್ ಗಳನ್ನು ದಾಖಲಿಸಿದ್ದಾರೆ.

ಕೆಲ ವಾಹನ ಚಾಲಕರು ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ (vechiles) ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಅಳವಡಿಸಿಕೊಳ್ಳುತ್ತಿದ್ದರು. ಲೈಟ್ ಗಳ (lights) ಬೆಳಕಿನ ತೀವ್ರತೆಯಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿತ್ತು.  ಕೆಲವೊಮ್ಮೆ ಅಪಘಾತಗಳಿಗೂ (accidents) ಕಾರಣವಾಗುತ್ತಿತ್ತು.

ಈ ಸಂಬಂಧ 1-7-2024 ರಿಂದ ಇಲ್ಲಿಯವರೆಗೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ‘ಕೇಂದ್ರ ಮೋಟಾರು ವಾಹನಗಳ ನಿಯಮಗಳ (indian motor vehicle act) ಅಡಿಯಲ್ಲಿ ಅನುಮತಿಸಲಾದ ಲೈಟ್​ಗಳನ್ನ ಹೊರತುಪಡಿಸಿ, ಇತರೆ ಪ್ರಖರ ಬೆಳಕು ಹೊರಸೂಸುವ ಲೈಟ್ ಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಜೊತೆಗೆ ಐಎಂಎ ಕಾಯ್ದೆಯಡಿ ಕೇಸ್ ದಾಖಲಿಸಲಾಗುತ್ತಿದೆ’ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಶಿವಮೊಗ್ಗ (shimoga) ಪೊಲೀಸ್ ಉಪ ವಿಭಾಗ – ಎ ವ್ಯಾಪ್ತಿಯಲ್ಲಿ 38, ಬಿ – ವ್ಯಾಪ್ತಿಯಲ್ಲಿ 471 ಕೇಸ್, ಭದ್ರಾವತಿ (bhadravati) ಉಪ ವಿಭಾಗ ವ್ಯಾಪ್ತಿಯಲ್ಲಿ 388 ಕೇಸ್, ಶಿಕಾರಿಪುರ (shikaripur) ಉಪ ವಿಭಾಗ ವ್ಯಾಪ್ತಿಯಲ್ಲಿ 350 ಪ್ರಕರಣಗಳು,

ಸಾಗರ (sagar) ಉಪ ವಿಭಾಗ ವ್ಯಾಪ್ತಿಯಲ್ಲಿ 172 ಪ್ರಕರಣಗಳು ಮತ್ತು ತೀರ್ಥಹಳ್ಳಿ (thirthahalli) ಉಪ ವಿಭಾಗ 146 ಪ್ರಕರಣಗಳು ಸೇರಿದಂತೆ ಒಟ್ಟು 1565 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →