ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕು!

ಶಿವಮೊಗ್ಗ (shivamogga), ಆ. 16: ಮಲೆನಾಡಿನಲ್ಲಿ (malnad) ಕಡಿಮೆಯಾಗಿದ್ದ ಮುಂಗಾರು ಮಳೆಯ (monsoon rain) ತೀವ್ರತೆ ಮತ್ತೆ ಕ್ರಮೇಣ ಹೆಚ್ಚಾಗಲಾರಂಭಿಸಿದೆ. ಜಿಲ್ಲೆಯ ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ ಹಲವೆಡೆ ಮಳೆಯಾಗಲಾರಂಭಿಸಿದೆ.

ಶುಕ್ರವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ (linganamakki dam) ಒಳಹರಿವು 7643 ಕ್ಯೂಸೆಕ್ ಇದೆ. 7504 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ (outflow).  ಡ್ಯಾಂ ನೀರಿನ ಮಟ್ಟ1816. 85 (ಗರಿಷ್ಠ ಮಟ್ಟ : 1819) ಅಡಿಯಿದೆ.

ತುಂಗಾ ಜಲಾಶಯದ (tunga dam) ಒಳಹರಿವು (inflow) 10,969 ಕ್ಯೂಸೆಕ್ ಒಳಹರಿವಿದ್ದು, ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳಹರಿವಿನಷ್ಟೆ ನೀರನ್ನು ಹೊರಬಿಡಲಾಗುತ್ತಿದೆ.

ಭದ್ರಾ ಜಲಾಶಯದ (bhadra dam) ಒಳಹರಿವು 8419 ಕ್ಯೂಸೆಕ್ ಇದ್ದು, 7841 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.  ಡ್ಯಾಂ ನೀರಿನ ಮಟ್ಟ 180. 2 (ಗರಿಷ್ಠ ಮಟ್ಟ : 186) ಅಡಿಯಿದೆ.

ಮಳೆ : ಶುಕ್ರವಾರ ಶಿವಮೊಗ್ಗ ನಗರ (shimoga city) ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಾಯಿತು. ಮುಂದಿನ ಕೆಲ ದಿನಗಳವರೆಗೆ ಮಳೆ (rain) ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →