ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿಕೆ ಮುನ್ಸೂಚನೆ : ಸಾವೇಹಕ್ಲುವಿನಲ್ಲಿ 72 ಮಿ.ಮೀ. ವರ್ಷಧಾರೆ!

Monsoon rain forecast to continue in the malnad : 72 mm rainfall in Savehakklu! ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿಕೆ ಮುನ್ಸೂಚನೆ : ಸಾವೇಹಕ್ಲುವಿನಲ್ಲಿ 72 ಮಿ.ಮೀ. ವರ್ಷಧಾರೆ!

ಶಿವಮೊಗ್ಗ (shivamogga), ಆ. 17: ಮಲೆನಾಡಿನಲ್ಲಿ (malnad) ಇಳಿಕೆಯಾಗಿದ್ದ ಮಳೆ (rain) ಮತ್ತೆ ಚುರುಕುಗೊಂಡಿದೆ. ಈ ನಡುವೆ ಹವಾಮಾನ ಇಲಾಖೆಯು ಮುಂದಿನ ಕೆಲ ದಿನಗಳವರೆಗೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ (monsoon rain) ಮುಂದುವರಿಕೆಯ ಮುನ್ಸೂಚನೆ ನೀಡಿದೆ.

ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸನಗರ ತಾಲೂಕಿನ ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳಲ್ಲಿ ಬಿದ್ದ ಮಳೆ ವಿವರ (rainfall details) ಈ ಮುಂದಿನಂತಿದೆ.

ಸಾವೇಹಕ್ಲುವಿನಲ್ಲಿ (savehakklu) 76 ಮಿಲಿ ಮೀಟರ್, ಚಕ್ರಾ (chakra) 36 ಮಿ.ಮೀ., ಮಾಣಿ (mani) 16 ಮಿ.ಮೀ., ಮಾಸ್ತಿಕಟ್ಟೆ (masthikatte) 14 ಮಿ.ಮೀ., ಯಡೂರು (yadur) 8 ಮಿ.ಮೀ., ಹಾಗೂ ಹುಲಿಕಲ್ (hulikallu) ನಲ್ಲಿ 14 ಮಿ.ಮೀ. ವರ್ಷಧಾರೆಯಾಗಿದೆ.

ಡ್ಯಾಂ ವಿವರ : ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನ (linganamakki dam) ಒಳಹರಿವು 9249 ಕ್ಯೂಸೆಕ್ ಗೆ ಏರಿಕೆಯಾಗಿದೆ.

ಜಲಾಶಯದ ನೀರಿನ ಮಟ್ಟ (dam water level) 1816. 90 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 0. 05 ಅಡಿಯಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1790. 35 ಅಡಿ ನೀರು ಸಂಗ್ರಹವಾಗಿತ್ತು.

ತುಂಗಾ ಜಲಾಶಯದ (tunga dam) ಒಳಹರಿವು 12,500 ಕ್ಯೂಸೆಕ್ ಇದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳಹರಿವಿನಷ್ಟೆ ನೀರನ್ನು ಹೊರ ಹರಿಸಲಾಗುತ್ತಿದೆ (out flow).

ಉಳಿದಂತೆ ಭದ್ರಾ ಜಲಾಶಯದs (bhadra dam) ಒಳಹರಿವು (inflow) 5665 ಕ್ಯೂಸೆಕ್ ಇದ್ದು, 6811 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180. 1 (ಗರಿಷ್ಠ ಮಟ್ಟ : 186) ಅಡಿಯಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →