shimoga | ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಮತ್ತೆ ಶುರುವಾಗಿದೆ ಪಿಕ್ ಪ್ಯಾಕೆಟ್ ಕಳ್ಳರ ಹಾವಳಿ!

shimoga | The menace of pick packet thieves has started again at Shimoga KSRTC bus station! ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮತ್ತೆ ಶುರುವಾಗಿದೆ ಪಿಕ್ ಪ್ಯಾಕೆಟ್ ಕಳ್ಳರ ಹಾವಳಿ!

ಶಿವಮೊಗ್ಗ (shivamogga), ಆ. 18: ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ (shimoga ksrtc bus stand) ಮಹಿಳಾ  ಪ್ರಯಾಣಿಕರ ಚಿನ್ನಾಭರಣ ಅಪಹರಿಸುತ್ತಿದ್ದ ಐನಾತಿ ಕಳ್ಳಿಯರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಕಳೆದ ಕೆಲ ವಾರಗಳ ಹಿಂದಷ್ಟೆ ಬಂಧಿಸಿ ಜೈಲಿಗಟ್ಟಿದ್ದರು.

ತದನಂತರ ಬಸ್ ನಿಲ್ದಾಣ ಆವರಣದಲ್ಲಿ ಕಳವು ಕೃತ್ಯಗಳು (theft cases) ಕಡಿಮೆಯಾಗಿದ್ದವು. ಇದೀಗ ಮತ್ತೆ ಮಹಿಳಾ ಪ್ರಯಾಣಿಕರೋರ್ವರ ವ್ಯಾನಿಟಿ ಬ್ಯಾಗ್ (vanity bag) ನಲ್ಲಿದ್ದ ಚಿನ್ನಾಭರಣ ಕಳುವಾದ ಘಟನೆ ನಡೆದಿದೆ. ಇದರಿಂದ ಮತ್ತೆ ಬಸ್ ನಿಲ್ದಾಣ ಆವರಣದಲ್ಲಿ ಕಳ್ಳರ ತಂಡಗಳಸು ಸಕ್ರಿಯವಾಗಿರುವ ಅನುಮಾನಗಳು ವ್ಯಕ್ತವಾಗುವಂತಾಗಿದೆ.

ಕಳವು : ಶಿವಮೊಗ್ಗದ ಮದಾರಿಪಾಳ್ಯದ ನಿವಾಸಿ ಮೊಹಮ್ಮದ್ ಮುಹೀಬುಲ್ಲಾ ಎಂಬುವರು ಪತ್ನಿ, ಮಗನೊಂದಿಗೆ ಕಳೆದ ಆ. 14 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ದಾವಣಗೆರೆ (davanagere) ಬಸ್ ಹತ್ತಿದ್ದಾರೆ.

ಈ ವೇಳೆ ಅವರ ಪತ್ನಿಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನು(jewellery) ಕಳ್ಳರು ಅಪಹರಿಸಿದ್ದಾರೆ. 37,500 ರೂ. ಮೌಲ್ಯದ ಬಂಗಾರದ ಉಂಗುರ, 16,300 ರೂ. ಮೌಲ್ಯದ ಕಿವಿಯೊಲೆ ಕಳ್ಳತನ (theft) ಮಾಡಲಾಗಿದೆ.

ಬಸ್ ಹತ್ತುವ ವೇಳೆ ಸಾಕಷ್ಟು ಜನಸಂದಣಿಯಿತ್ತು. ಈ ವೇಳೆಯೇ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಅಪಹರಿಸಲಾಗಿದೆ ಎಂದು ಆ. 16 ರಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (doddapete police station) ಪ್ರಕರಣ ದಾಖಲಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →