shimoga | ಶಿವಮೊಗ್ಗ – ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು : ವಾರಸುದಾರರ ಪತ್ತೆಗೆ ಸಹಕರಿಸಲು ಟ್ರಾಫಿಕ್ ಪೊಲೀಸರ ಮನವಿ

shimoga | Shimoga - An unknown person died in an accident: Traffic police requested to help in tracing the heirs shimoga | ಶಿವಮೊಗ್ಗ - ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು : ವಾರಸುದಾರರ ಪತ್ತೆಗೆ ಸಹಕರಿಸಲು ಟ್ರಾಫಿಕ್ ಪೊಲೀಸರ ಮನವಿ

ಶಿವಮೊಗ್ಗ (shivamogga), ಆ. 20:  ರಸ್ತೆ ಅಪಘಾತದಲ್ಲಿ (accident) ಮೃತಪಟ್ಟ ಅಪರಿಚಿತ ವ್ಯಕ್ತಿಯ (unknown person) ವಾರಸುದಾರರ ಪತ್ತೆಗೆ ಸಹಕರಿಸುವಂತೆ, ಶಿವಮೊಗ್ಗ ಪಶ್ಚಿಮ ಸಂಚಾರಿ ಠಾಣೆ ಪೊಲೀಸರು (traffic police) ನಾಗರೀಕರಿಗೆ ಮನವಿ ಮಾಡಿದ್ದಾರೆ.

ಆ.17 ರಂದು ನಗರದ ಸಾಗರ ರಸ್ತೆ (sagar road) ಮಹೀಂದ್ರ ಶೋ ರೂಂ ಎದುರು ಮೋಟಾರ್ ಬೈಕ್ ಡಿಕ್ಕಿ (bike accident) ಹೊಡೆದು, ಸುಮಾರು 35 ವರ್ಷದ ವ್ಯಕ್ತಿಯೋರ್ವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ (govt Meggan hospital) ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ. 18 ರಂದು ಮೃತಪಟ್ಟಿರುತ್ತಾರೆ (death). 

ಮೃತರ ಹೆಸರು, ವಿಳಾಸ, ವಾರಸುದಾರರ ವಿವರ ಸೇರಿದಂತೆ ಯಾವುದೇ ಮಾಹಿತಿ ಗೊತ್ತಾಗಿಲ್ಲ. ಮೃತ ವ್ಯಕ್ತಿಯು 5.8 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ.

ಮೃತನ ಬಲಮುಂಗೈ ಒಳಭಾಗದಲ್ಲಿ ಅಮ್ಮ (Amma) ಎಂಬ ಹಚ್ಚೆ ಗುರುತು ಇರುತ್ತದೆ. ಮೈಮೇಲೆ ಕಪ್ಪು ಬಣ್ಣದ ತುಂಬು ತೋಳಿನ ಷರ್ಟ್, ನಶೆ ಬಣ್ಣದ ಟೀಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಮೃತರ ವಾರಸುದಾರರ  ಬಗ್ಗೆ ಮಾಹಿತಿ ದೊರಕಿದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ (shimoga west traffic police station) ಸಂಪರ್ಕ ಸಂಖ್ಯೆ.: 08182-261417/ 9480803346/9480803309 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →