shimoga | ಶಿವಮೊಗ್ಗ – ಭಾರೀ ಮಳೆಗೆ ಬಿರುಕು ಬಿಡುತ್ತಿರುವ ಕೆರೆ ಏರಿ : ಎಚ್ಚೆತ್ತುಕೊಳ್ಳುವುದೆ ತಾಲೂಕು ಆಡಳಿತ?

shimoga | Shimoga - The lake is bursting due to heavy rain: Will the taluk administration wake up? ಶಿವಮೊಗ್ಗ - ಭಾರೀ ಮಳೆಗೆ ಬಿರುಕು ಬಿಡುತ್ತಿರುವ ಕೆರೆ ಏರಿ : ಎಚ್ಚೆತ್ತುಕೊಳ್ಳುವುದೆ ತಾಲೂಕು ಆಡಳಿತ?

ಶಿವಮೊಗ್ಗ (shivamogga), ಆ. 20: ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದ (basavanaganguru village) ಹಿರೇಕೆರೆಯು, ಇತ್ತೀಚೆಗೆ ಬೀಳುತ್ತಿರುವ ಭಾರೀ ಮಳೆಗೆ (heavy rainfall) ಸಂಪೂರ್ಣ ಭರ್ತಿಯಾಗಿದ್ದು, ಉಕ್ಕಿ ಹರಿಯುತ್ತಿದೆ.

ಈ ನಡುವೆ ಕೆರೆ ಏರಿಯ (lake bund) ಕೆಲವೆಡೆ ಸಣ್ಣ ಪ್ರಮಾಣದ ಬಿರುಕು (crack) ಕಾಣಿಸಿಕೊಂಡಿದೆ. ಇದೇ ರೀತಿ ಮಳೆ (rain) ಮುಂದುವರಿದರೆ ಬಿರುಕು ಹೆಚ್ಚಾಗಿ, ಏರಿಯೇ ಒಡೆದು ಹೋಗುವ (break) ಸಾಧ್ಯತೆಯಿದೆ ಎಂದು ಸ್ಥಳಿಯ ಗ್ರಾಮಸ್ಥರು (villagers) ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕೆರೆಯ ಏರಿ ಮಟ್ಟಕ್ಕೆ ನೀರು ನಿಂತಿದೆ (lake water level). ಭಾರೀ ಮಳೆಯಾಗುತ್ತಿರುವುದರಿಂದ (heavy rainfall), ಅಪಾರ ಪ್ರಮಾಣದ ನೀರು ಕೆರೆಗೆ ಹರಿದು ಬರುತ್ತಿದೆ. ಆದರೆ ಕೆರೆ ಕಾಲುವೆಗಳ (canals) ಅವ್ಯವಸ್ಥೆಯಿಂದ ಸರಾಗವಾಗಿ ಮಳೆ ನೀರು (rain water) ಹರಿದು ಹೋಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಈಗಾಗಲೇ ಹಲವು ಬಾರಿ ಕೆರೆ ಕಾಲುವೆಗಳ ಅವ್ಯವಸ್ಥೆ ಸರಿಪಡಿಸುವಂತೆ ತಾಲೂಕು ಆಡಳಿತ ಹಾಗೂ ಸಣ್ಣ ನೀರಾವರಿ ಇಲಾಖೆಗೆ (minor irrigation department) ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದ ಇದೀಗ ಕೆರೆ ಸ್ಥಿತಿ ಅಪಾಯಕಾರಿ ಮಟ್ಟಕ್ಕೆ ತಲುಪುವಂತಾಗಿದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ತಕ್ಷಣವೇ ತಾಲೂಕು ಆಡಳಿತs (taluk administration) ಹಾಗೂ ಸಣ್ಣ ನೀರಾವರಿ ಇಲಾಖೆ ಎಚ್ಚೆತ್ತುಕೊಳ್ಳಬೇಕು. ಕೆರೆ ಏರಿ ಮೇಲೆ ಕಂಡುಬರಲಾರಂಭಿಸಿರುವ ಬಿರುಕು ಮುಚ್ಚಲು ಕ್ರಮಕೈಗೊಳ್ಳಬೇಕು. ಕೆರೆ ಕಾಲುವೆಗಳ ಮೂಲಕ ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →