ಕಾಡಾನೆ ದಾಳಿ : ಗದಗ ಮೂಲದ ಕೃಷಿ ಕೂಲಿ ಕಾರ್ಮಿಕ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

wild elephant attack : Gadag-based agricultural laborer dies - demand for appropriate compensation ಕಾಡಾನೆ ದಾಳಿ : ಗದಗ ಮೂಲದ ಕೃಷಿ ಕೂಲಿ ಕಾರ್ಮಿಕ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಶಿವಮೊಗ್ಗ (shivamogga), ಆ. 24: ಕಾಡಾನೆ ದಾಳಿಯಿಂದ (wild elephant attack), ಕೃಷಿ ಕೂಲಿಕಾರ್ಮಿಕರೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಆ. 24 ರ ಶನಿವಾರ ರಾತ್ರಿ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲದೇವರ ಹೊಸೂರು (aladevara hosur) ಗ್ರಾಮದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ನಿವಾಸಿ ಹನುಮಂತಪ್ಪ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಕೆಲಸ ಮಾಡುತ್ತಿದ್ದ ತೋಟದ ಬಳಿ ಬರುತ್ತಿದ್ದ ವೇಳೆ, ಏಕಾಏಕಿ ಕಾಡಾನೆ (elephant) ದಾಳಿ ನಡೆಸಿದೆ.

ಗಂಭೀರವಾಗಿ ಗಾಯಗೊಂಡ ಹನುಮಂತಪ್ಪ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ (forest dept) ಅಧಿಕಾರಿ – ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

ಹನುಮಂತಪ್ಪ ಅವರು ಕಳೆದ ಹಲವು ವರ್ಷಗಳಿಂದ ಶ್ರೀಧರ್ ಎಂಬುವರ ತೋಟದಲ್ಲಿ ಕೂಲಿಕಾರ್ಮಿಕರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ತೋಟದಲ್ಲಿನ ಮನೆಯಲ್ಲಿಯೇ ಪತ್ನಿ, ಮೂರು ಮಕ್ಕಳೊಂದಿಗೆ ನೆಲೆಸಿದ್ದರು ಎಂದು ಸ್ಥಳೀಯ ರೈತರು ಮಾಹಿತಿ ನೀಡಿದ್ದಾರೆ.

ಹನುಮಂತಪ್ಪ ಅವರು ಅತ್ಯಂತ ಕಡುಬಡವರಾಗಿದ್ದಾರೆ. ಅವರ ಸಾವಿನಿಂದ ಇಡೀ ಕುಟುಂಬ ಬೀದಿ ಪಾಲಾಗುವಂತಾಗಿದೆ. ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →