ಹೊಸನಗರ (hosanagara), ಆ. 25: ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಸರಗಳ್ಳನೋರ್ವ (chain snatcher), ಕಾರ್ಯಕರ್ತೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ (hosanagara) ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬ್ಬೈಲು ಗ್ರಾಮದಲ್ಲಿ ನಡೆದಿದೆ.
ಮಿನಿ ಅಂಗನವಾಡಿ ಕಾರ್ಯಕರ್ತೆ (anganwadi worker) ತಾರಾಮತಿ ಎಂಬುವರೇ ಮಾಂಗಲ್ಯ ಸರ (mangal sutra) ಕಳೆದುಕೊಂಡ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಲಾಗಿದೆ. ಕಳುವಾದ ಮಾಂಗಲ್ಯ ಸರ 42 ಗ್ರಾಂ ತೂಕದ್ದಾಗಿದ್ದು, 3.20 ಲಕ್ಷ ರೂ. ಮೌಲ್ಯದ್ದೆಂದು ಅಂದಾಜಿಸಲಾಗಿದೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ : ಆ. 22 ರ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ನೀಲಿ ಜರ್ಕಿನ್ ಹಾಕಿಕೊಂಡಿದ್ದ ದುಷ್ಕರ್ಮಿ ಅಂಗನವಾಡಿಗೆ (anganwadi) ನುಗ್ಗಿದ್ದಾನೆ. ನಂತರ ಕಾರ್ಯಕರ್ತೆಗೆ ಬೆದರಿಕೆ ಹಾಕಿ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.
ಹೊಸನಗರ ತಾಲೂಕಿನ (hosanagara taluk) ಹಲವೆಡೆ ಅಂಗನವಾಡಿ ಹಾಗೂ ಮಿನಿ ಅಂಗನವಾಡಿ ಕೇಂದ್ರಗಳು, ಗ್ರಾಮಗಳ ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ನಡೆಯುತ್ತಿವೆ.

