Rainfall has decreased in Malnad: Linganamakki Dam still 8 feet away from filling! ಮಲೆನಾಡಲ್ಲಿ ತಗ್ಗಿದ ಮಳೆ : ಲಿಂಗನಮಕ್ಕಿ ಡ್ಯಾಂ ಭರ್ತಿಗೆ 8 ಅಡಿ ಬಾಕಿ!

shimoga | ಭಾರೀ ಮಳೆ ಸಾಧ್ಯತೆ : ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್!

ಶಿವಮೊಗ್ಗ (shivamogga), ಆ. 25: ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ, ಮುಂಗಾರು ಮಳೆಯ (monsoon rain) ತೀವ್ರತೆ ಆಗಸ್ಟ್ ತಿಂಗಳಲ್ಲಿ ಕಡಿಮೆಯಾಗಿತ್ತು. ಈ ನಡುವೆ ಇತ್ತೀಚೆಗೆ ಮತ್ತೆ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿತ್ತು. ಹಲವೆಡೆ ಭಾರೀ ಮಳೆಯಾಗಿತ್ತು (heavy rainfall).

ಶನಿವಾರ ಶಿವಮೊಗ್ಗ ತಾಲೂಕು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ (rain). ಈ ನಡುವೆ ಮುಂದಿನ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (meteorological department) ನೀಡಿದೆ.

12 ರಿಂದ 20 ಸೆಂಟಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ (orange alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಂಕಷ್ಟ : ಪ್ರಸ್ತುತ ವರ್ಷ ಭಾರೀ ಮಳೆಯಿಂದ ಮೆಕ್ಕೆಜೋಳ (maize) ಬೆಳೆಗಾರರು ಸಂಕಷ್ಟ ಸಿಲುಕುವಂತಾಗಿದೆ. ಹಲವೆಡೆ ಮೆಕ್ಕೆಜೋಳ ಬೆಳೆ (maize crop) ಹಾಳಾಗಿದೆ. ಮತ್ತೊಂದೆಡೆ, ಮಳೆ ಮುಂದುವರಿದಿರುವುದರಿಂದ ಅಳಿದುಳಿದ ಬೆಳೆಯು ಕೂಡ ಮಳೆ ಸಿಲುಕಿ ಹಾಳಾಗುತ್ತಿದೆ ಎಂದು ಬೆಳೆಗಾರರು ಅಳಲು ತೋಡಿಕೊಳ್ಳುತ್ತಾರೆ.

The thief entered Anganwadi and snatched the workers Mangala sutra! ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ ಮಾಂಗಲ್ಯ ಸರ ಅಪಹರಿಸಿದ ಕಳ್ಳ! Previous post hosanagara | ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ ಮಾಂಗಲ್ಯ ಸರ ಅಪಹರಿಸಿದ ಕಳ್ಳ!
Siddaramaiah's support from the backward Dalit exploited classes Swamiji! ಸಿದ್ದರಾಮಯ್ಯಗೆ ಹಿಂದುಳಿದ ದಲಿತ ಶೋಷಿತ ವರ್ಗಗಳ ಸ್ವಾಮೀಜಿಗಳ ಬೆಂಬಲ Next post bengaluru | ಸಿದ್ದರಾಮಯ್ಯಗೆ ಹಿಂದುಳಿದ, ದಲಿತ, ಶೋಷಿತ ವರ್ಗಗಳ ಸ್ವಾಮೀಜಿಗಳ ಬೆಂಬಲ!