bengaluru | ಸಿದ್ದರಾಮಯ್ಯಗೆ ಹಿಂದುಳಿದ, ದಲಿತ, ಶೋಷಿತ ವರ್ಗಗಳ ಸ್ವಾಮೀಜಿಗಳ ಬೆಂಬಲ!

Siddaramaiah's support from the backward Dalit exploited classes Swamiji! ಸಿದ್ದರಾಮಯ್ಯಗೆ ಹಿಂದುಳಿದ ದಲಿತ ಶೋಷಿತ ವರ್ಗಗಳ ಸ್ವಾಮೀಜಿಗಳ ಬೆಂಬಲ

ಬೆಂಗಳೂರು (bengaluru), ಆ. 25: ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. 

ಕೃತಕವಾಗಿ ಸರ್ಕಾರ ಅಸ್ಥಿರಗೊಳಿಸಲು, ಕೇಂದ್ರ ಸರ್ಕಾರ ಮತ್ತು ರಾಜಭವನ ಷಡ್ಯಂತ್ರ ನಡೆಸುತ್ತಿವೆ ಎಂದು ಸ್ವಾಮೀಜಿಗಳು ದೂರಿದ್ದಾರೆ. ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ.

ನಿಯೋಗದಲ್ಲಿದ್ದ ಸ್ವಾಮೀಜಿಗಳ ವಿವರ : ನಿರಂಜನಾನಂದಪುರಿ ಮಹಾಸ್ವಾಮೀಜಿ – ಕನಕ ಪೀಠ ಕಾಗಿನೆಲೆ, ಶಾಂತವೀರ ಮಹಾಸ್ವಾಮೀಜಿ – ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ, 

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು – ಭೋವಿ ಗುರುಪೀಠ ಚಿತ್ರದುರ್ಗ, ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು – ಮಾದರ ಚನ್ನಯ ಗುರುಪೀಠ ಚಿತ್ರದುರ್ಗ,  

ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥ ಪೀಠ ಮಧುರೆ, 

ಈಶ್ವರಾನಂದಪುರಿ ಮಹಾಸ್ವಾಮಿಗಳು – ಕನಕ ಗುರುಪೀಠ ಹೊಸದುರ್ಗ, ರೇಣುಕಾನಂದ ಸ್ವಾಮಿಗಳು – ನಾರಾಯಣ ಗುರುಪೀಠ ಶಿವಮೊಗ್ಗ, ಬಸವ ಮಾಚಿದೇವ ಮಹಾಸ್ವಾಮಿಗಳು –  ಮಡಿವಾಳ ಗುರುಪೀಠ ಚಿತ್ರದುರ್ಗ,

ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು – ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ, ಶಾಂತಮ್ಮಯ್ಯ ಸ್ವಾಮೀಜಿಗಳು – ಸರೂರು ವಿಜಯನಗರ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →