ಶಿವಮೊಗ್ಗ (shivamogga), ಆ. 28: ಇತ್ತೀಚೆಗೆ ಎಲ್ಲೆಡೆ ಕೆಲಸಕಾರ್ಯಗಳಿಗೆ, ಹೊರ ರಾಜ್ಯಗಳಿಂದ ಆಗಮಿಸುವ ಕಾರ್ಮಿಕರನ್ನು (labour) ಬಳಕೆ ಮಾಡಲಾಗುತ್ತಿದೆ. ಈ ನಡುವೆ ಇಂತಹ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವ ಮುನ್ನ, ಪೊಲೀಸ್ ಠಾಣೆ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ!
ಈ ಸಂಬಂಧ ಕಾರ್ಮಿಕ ಇಲಾಖೆ (labour department) ಆದೇಶ ಹೊರಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ವಿವರ ಈ ಮುಂದಿನಂತಿದೆ.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ, ಕಟ್ಟಡ ಕಾಮಗಾರಿ (building work) ಮತ್ತಿತರ ಕೆಲಸಗಳಿಗೆ ಮೇಸ್ತ್ರಿ/ಮಾಲೀಕ/ಗುತ್ತಿಗೆದಾರರು ಹೊರ ರಾಜ್ಯದಿಂದ ಬರುವ ಕಾರ್ಮಿಕರನ್ನು (out-of-state workers) ಬಳಸಿಕೊಳ್ಳುತ್ತಿದ್ದಾರೆ.
ಹೀಗೆ ಕೆಲಸಕ್ಕೆ ತೆಗೆದುಕೊಳ್ಳುವುದಕ್ಕೂ ಮುನ್ನ ಹೊರ ರಾಜ್ಯ ಕಾರ್ಮಿಕರ ಆಧಾರ್ ಕಾರ್ಡ್ (aadhar card) ಮತ್ತು ವಿಳಾಸವನ್ನು ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆ (police station) ಮತ್ತು ಕಾರ್ಮಿಕ ಇಲಾಖೆಗೆ ನೀಡಬೇಕು. ನಂತರವಷ್ಟೆ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಬೇಕು.
ತಪ್ಪಿದ್ದಲ್ಲಿ ಈ ಕಾರ್ಮಿಕರುಗಳಿಂದ ಯಾವುದೇ ಅಹಿತಕರ ಘಟನೆ / ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದರೆ, ಕಾರ್ಮಿಕರನ್ನು ನೇಮಿಸಿಕೊಂಡಿದ್ದ ಮೇಸ್ತ್ರಿ/ ಮಾಲೀಕರು/ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

