shimoga | ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ರಸ್ತೆಯಲ್ಲಿ ಶೆಡ್ ನಿರ್ಮಾಣ : ತೆರವಿಗೆ ಆಗ್ರಹಿಸಿ ಪಾಲಿಕೆ ಆವರಣದಲ್ಲಿ ಪ್ರತಿಭಟನೆ

shimoga | construction of shed on road by shimoga-bhadravati urban development authority : protest in corporation premises demanding eviction ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ರಸ್ತೆಯಲ್ಲಿ ಶೆಡ್ ನಿರ್ಮಾಣ : ತೆರವಿಗೆ ಆಗ್ರಹಿಸಿ ಪಾಲಿಕೆ ಆವರಣದಲ್ಲಿ ಪ್ರತಿಭಟನೆ

ಶಿವಮೊಗ್ಗ (shivamogga), ಆ. 28: ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು (shimoga – bhadravatis urban development authority), ಸಾರ್ವಜನಿಕ ರಸ್ತೆಯಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಿರುವ ಶೆಡ್ (shed) ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ, ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟವು ಶಿವಮೊಗ್ಗ ಪಾಲಿಕೆ (corporation) ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.

ವಿನೋಬನಗರ ಬಡಾವಣೆಯಲ್ಲಿರುವ ಪ್ರಾಧಿಕಾರದ ಕಚೇರಿ ಎದುರು ಕಳೆದ 40 ವರ್ಷಗಳ ಹಿಂದೆ, 30 ಅಡಿ ರಸ್ತೆ (road) ನಿರ್ಮಾಣ ಮಾಡಲಾಗಿತ್ತು. ಜನ – ವಾಹನ ಸಂಚಾರವಿರುವ ರಸ್ತೆಯಾಗಿದೆ. ಜೊತೆಗೆ ಸದರಿ ರಸ್ತೆಗೆ ಪಾಲಿಕೆ ಆಡಳಿತವು ಡಾಂಬರೀಕರಣ ನಡೆಸಿಕೊಂಡು ಬರುತ್ತಿತ್ತು.

ಪ್ರಾಧಿಕಾರದ ಮಹಾನಗರ ಯೋಜನೆಯ ನಕ್ಷೆಗಳಲ್ಲಿಯೂ ಸಹ ಸದರಿ ರಸ್ತೆಯನ್ನು ಗುರುತಿಸಲಾಗಿದೆ. ಆದರೆ ಪ್ರಾಧಿಕಾರವು ಏಕಾಏಕಿ ರಸ್ತೆ ಬಂದ್ ಮಾಡಿ, ವಾಹನಗಳ ನಿಲುಗಡೆಯ ಶೆಡ್ (parking shed) ನಿರ್ಮಾಣ ಮಾಡಿದೆ. ಪಾಲಿಕೆಯಿಂದ ನಿಯಮಾನುಸಾರ ಲೈಸೈನ್ಸ್ ಪಡೆದಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಪ್ರಾಧಿಕಾರ ಶೆಡ್ ನಿರ್ಮಾಣ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಅಧಿಕೃತ ರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಶೆಡ್ ತೆರವುಗೊಳಿಸುವಂತೆ, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಸೂಚಿಸಿದ್ದಾರೆ. ಆದರೆ ಇಲ್ಲಿಯವರೆಗೂ ಶೆಡ್ ತೆರವುಗೊಳಿಸಿಲ್ಲ. ತಕ್ಷಣವೇ ಪಾಲಿಕೆ ಆಡಳಿತ ಅನದಿಕೃತ ಶೆಡ್ ತೆರವುಗೊಳಿಸಬೇಕು (unauthorized shed should be cleared). ತಪ್ಪಿತಸ್ತರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →