bengaluru | ಸಿಎಂ ವಿರುದ್ದ ಪ್ರಾಸಿಕ್ಯೂಷನ್, ಡಿಸಿಎಂ ವಿರುದ್ದ ಸಿಬಿಐ ತನಿಖೆ ಪ್ರಕರಣ : ಹೈಕೋರ್ಟ್ ನತ್ತ ಎಲ್ಲರ ಚಿತ್ತ!

CM, DCM to Shivamogga : Citizens of the district demand implementation of their demandsಶಿವಮೊಗ್ಗಕ್ಕೆ ಸಿಎಂ, ಡಿಸಿಎಂ : ಬೇಡಿಕೆಗಳ ಕಾರ್ಯಗತಕ್ಕೆ ಜಿಲ್ಲೆಯ ನಾಗರೀಕರ ಆಗ್ರಹ

ಬೆಂಗಳೂರು (bangaluru), ಆ. 29: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (muda case) ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮ್ಮ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದುಪಡಿಸುವಂತೆ ಕೋರಿ, ಸಿಎಂ ಸಿದ್ದರಾಮಯ್ಯ (cm siddaramaiah) ಸಲ್ಲಿಸಿರುವ ಅರ್ಜಿಯ ವಿಚಾರಣೆ ಆ. 29 ರ ಗುರುವಾರ ಹೈಕೋರ್ಟ್ (high court) ನಲ್ಲಿ ವಿಚಾರಣೆಗೆ ಬರಲಿದೆ. ಇದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಪ್ರಕರಣದ ವಿಚಾರಣೆ ನಡೆಸುತ್ತಿದೆ. ಪ್ರಾಸಿಕ್ಯೂಷನ್ (prosecution) ಗೆ ಅನುಮತಿ ನೀಡಿರುವ ರಾಜ್ಯಪಾಲರ (governor of karnataka) ಕ್ರಮ ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆ. 19 ರಂದು ನಡೆದಿತ್ತು.

ಈ ವೇಳೆ ನ್ಯಾಯಪೀಠವವು ಆ. 29 ರವರೆಗೆ ಆತುರದ ಕ್ರಮ ಜರುಗಿಸಬಾರದು ಎಂದು ಅಧೀನ ನ್ಯಾಯಾಲಯಗಳು ಹಾಗೂ ಲೋಕಾಯುಕ್ತಕ್ಕೆ ಸೂಚನೆ ನೀಡಿತ್ತು. ಸಿಎಂ ಸಿದ್ದರಾಮಯ್ಯ ವಿರುದ್ದದ ಪ್ರಾಸಿಕ್ಯೂಷನ್ ಪ್ರಕರಣವು ರಾಷ್ಟ್ರ – ರಾಜ್ಯ ರಾಜಕೀಯ ವಲಯದ ಗಮನ ಸೆಳೆದಿದೆ. ಈ ಕಾರಣದಿಂದ ಹೈಕೋರ್ಟ್’ನಲ್ಲಿ ಪ್ರಕರಣದ ವಿಚಾರಣೆ ಏನಾಗಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿದೆ.

ಬೆಂಗಳೂರು (bangaluru), ಆ. 29: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (dcm d k shivakumar) ಅವರ ವಿರುದ್ಧದ, ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು, ಸಿಬಿಐ (cbi) ಗೆ ನೀಡಿದ್ದನ್ನು ರದ್ದುಪಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್ ಗೆ ಸಲ್ಲಿಕೆಯಾಗಿರುವ ಅರ್ಜಿಯ ತೀರ್ಪು (judgement) ಆ. 29 ರ ಗುರುವಾರ ಪ್ರಕಟವಾಗಲಿದೆ

ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸಂಸ್ಥೆ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basanagouda patil yatnal) ಅವರು ಹೈಕೋರ್ಟ್ ನಲ್ಲಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈಗಾಗಲೇ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಆ. 29 ರ ಸಂಜೆ 4. 30 ಕ್ಕೆ ತೀರ್ಪು ಪ್ರಕಟವಾಗುವ ಸಾಧ್ಯತೆಯಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 2022 ರ ಸೆ. 25 ರಂದು ಡಿ.ಕೆ.ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ಅಂದಿನ ಬಿಜೆಪಿ ಸರ್ಕಾರ (bjp govt) ಆದೇಶಿಸಿತ್ತು. ಈ ಆದೇಶ ರದ್ದತಿ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು, 2023 ಏ.20 ರಂದು ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿತ್ತು.

ಇದರ ವಿರುದ್ದ ಡಿ.ಕೆ.ಶಿವಕುಮಾರ್ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠದ ಆದೇಶ ಹಾಗೂ ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು. ಈ ನಡುವೆ ಹಾಲಿ ಕಾಂಗ್ರೆಸ್ ಸರ್ಕಾರ (congress govt), ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು ಲೋಕಾಯುಕ್ತಕ್ಕೆ ವಹಿಸುವ ನಿರ್ಧಾರ ಕೈಗೊಂಡಿತ್ತು.

ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹಾಗೂ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕಳೆದ ಆ. 12 ರಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ವಿಭಾಗೀಯ ಪೀಠ, ತೀರ್ಪು ಕಾಯ್ದಿರಿಸಿತ್ತು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →