shimoga | ಆಹಾರ ಪದಾರ್ಥ ತಯಾರಕರು – ಮಾರಾಟಗಾರರಿಗೆ ಲೈಸೆನ್ಸ್ ಕಡ್ಡಾಯ : ಇಲ್ಲದಿದ್ದರೆ ಬೀಳಲಿದೆ 10 ಲಕ್ಷ ರೂ. ದಂಡ!

License is mandatory for foodstuff manufacturers and sellers : otherwise Rs 10 lakh will fall Penalty! ಆಹಾರ ಪದಾರ್ಥ ತಯಾರಕರು - ಮಾರಾಟಗಾರರಿಗೆ ಲೈಸೆನ್ಸ್ ಕಡ್ಡಾಯ : ಇಲ್ಲದಿದ್ದರೆ ಬೀಳಲಿದೆ 10 ಲಕ್ಷ ರೂ. ದಂಡ!

ಶಿವಮೊಗ್ಗ (shivamogga), ಆ. 30: ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡುವ ಉದ್ದೇಶದಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ಹಾಗೂ ಅದರಡಿ ರಚಿಸಲಾಗಿರುವ ನಿಯಮಗಳು ಮತ್ತು ನಿಬಂಧನೆಗಳು 2011 ಆಗಸ್ಟ್ 5 ರಿಂದ ಜಾರಿಗೆ ಬಂದಿರುತ್ತದೆ. 

ಆಹಾರ ತಯಾರಕರು/ವ್ಯಾಪಾರಿಗಳು ನೋಂದಣಿ / ಪರವಾನಿಗಿs (License) ಪಡೆದಿರಬೇಕು ಇಲ್ಲವಾದಲ್ಲಿ ಆಹಾರ ವಸ್ತುಗಳ ವಹಿವಾಟು ನಡೆಸುವಂತಿಲ್ಲ. ಇದರ ಉಲ್ಲಂಘನೆಯು ರೂ. 10 ಲಕ್ಷದವರೆಗೆ ದಂಡ ವಿಧಿಸಬಹುದಾದ ಅಪರಾಧವಾಗುತ್ತದೆ. ಇದರಂತೆ ವೆಜ್/ಚಿಕನ್/ಫಿಶ್ ಇತರೆ ಕಬಾಬ್ ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸುವುದು ನಿಷೇಧಿಸಲಾಗಿದೆ.

ರಸ್ತೆ ವ್ಯಾಪಾರಿಗಳು ತಳ್ಳುಗಾಡಿ ವ್ಯಾಪಾರಿಗಳ ಗೃಹ ಆಧಾರಿತ ಕ್ಯಾಂಟಿನ್ ಗಳು, ಟೀ ಅಂಗಡಿಗಳು, ತಂಪು ಪಾನೀಯ ತಯಾರಿಕ ಘಟಕಗಳು, ಕ್ಯಾಟರಿಂಗ್, ಕ್ಲಬ್ / ಕ್ಯಾಂಟಿನ್ ಗಳು/ಹೋಂಸ್ಟೇ ಆಹಾರ ವಿತರಕರು/ಶಾಲಾ, ಕಾಲೇಜು ಕ್ಯಾಂಟಿನ್ ಗಳು, ಹೋಟೆಲ್ ರೆಸ್ಟೋರೆಂಟ್ ಗಳು ರೆಸಾರ್ಟ್, ವೈನ್ ಸ್ಟೋರ್ ಗಳು ಬಾರ್ ಮತ್ತು ರೆಸ್ಟೋರೆಂಟ್ ಗಳು ಊಟದ ಸಂಯೋಜಕರು (ಕ್ಯಾಟರರ್ಸ್) 

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮ 2011 ನಿಬಂಧನೆಗಳು ಸಂಖ್ಯೆ 2.1.3 ಶೆಡ್ಯಾಲ್ ಐವಿ ಅನ್ವಯ ನೈರ್ಮಲ್ಯತೆಯಿಂದ ಕೂಡಿರುವ ಸ್ಥಳದಲ್ಲಿ ಗುಣಮಟ್ಟ ಆಹಾರವನ್ನು ತಯಾರಿಸಿ ನೀಡುವುದು ಇಲ್ಲವಾದಲ್ಲಿ ಸೆಕ್ಷನ್ 51, 54,56, 59 ರಂತೆ ಕ್ರಮ ಕೈಗೊಳ್ಳಲಾಗುವುದು.

ಇದರಂತೆ ದಿನಾಂಕ:30.08.2024 ಮತ್ತು 31.08.2024 ರಂದು ಜಿಲ್ಲೆಯಾದ್ಯಂತ ವಿವಿಧ ಬೇಕರಿ ಉತ್ಪನ್ನ ಮೀಟ್ ಚಿಕನ್ ಮತ್ತು ಎಲ್ಲಾ ಉತ್ಪನ್ನಗಳನ್ನು ವಿಶೇಷ ಆಂದೋಲನದ ಮೂಲಕ ವಿಶ್ಲೇಷಣೆಗಾಗಿ ಕಳುಹಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →