thirthahalli | ತುಂಗಾ ನದಿಗೆ ಕಾಲೇಜು ವಿದ್ಯಾರ್ಥಿ ಹಾರಿದ ಶಂಕೆ : ಅಗ್ನಿಶಾಮಕ ದಳದಿಂದ ಶೋಧ

thirthahalli | College student suspected of jumping into Tunga river : Search by fire brigade ತೀರ್ಥಹಳ್ಳಿ ತುಂಗಾ ನದಿಗೆ ಕಾಲೇಜು ವಿದ್ಯಾರ್ಥಿ ಹಾರಿದ ಶಂಕೆ : ಅಗ್ನಿಶಾಮಕ ದಳದಿಂದ ಶೋಧ

ತೀರ್ಥಹಳ್ಳಿ (thirthahalli), ಆ. 31: ಕಾಲೇಜ್ ವಿದ್ಯಾರ್ಥಿಯೋರ್ವ (college student) ತುಂಗಾ ನದಿಗೆ ಹಾರಿರುವ ಅನುಮಾನದ ಹಿನ್ನೆಲೆಯಲ್ಲಿ, ಆ. 31 ರ ಶನಿವಾರ ಬೆಳಿಗ್ಗೆಯಿಂದ ಅಗ್ನಿಶಾಮಕ ದಳ ತಂಡವು ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ತೀರ್ಥಹಳ್ಳಿ ಸಮೀಪದ ಇಂದಾವರದ ಗ್ರಾಮದ ನಿವಾಸಿ ಜಯದೀಪ್ (24) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ. ಅಂತಿಮ ಪದವಿ ವಿದ್ಯಾರ್ಥಿಯಾಗಿದ್ದಾನೆ. ಸೇತುವೆ ಬಳಿಯ ಮಾಧವ ಕಲ್ಯಾಣ ಮಂಟಪ ಸಮೀಪದ ತುಂಗಾ ನದಿ (tunga river) ಯಲ್ಲಿ ಯುವಕನಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ.

ಅಗ್ನಿಶಾಮಕ ದಳ (fire brigade) ದ ಅಧಿಕಾರಿ ನಾಗರಾಜ್ ಹಾಗೂ ಸಿಬ್ಬಂದಿಗಳಾದ ಶಾಕಿಬ್, ಆದರ್ಶ, ಶಿವು, ಶರತ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಯುವಕನು ತನ್ನ ಮೊಬೈಲ್ ಫೋನ್ ವ್ಯಾಟ್ಸಾಪ್ ಸ್ಟೇಟಸ್ (whatsup status) ನಲ್ಲಿ ಸಾವಿನ ಸಂದೇಶ ಹಾಕಿದ್ದಾನೆ. ಹಾಗೆಯೇ ಆತ ಬಳಸುತ್ತಿದ್ದ ಬೈಕ್ (bike) ನದಿ ಸಮೀಪ ಪತ್ತೆಯಾಗಿದೆ.

ಈ ಕಾರಣದಿಂದ ನದಿ (river) ಗೆ ಹಾರಿರುವ ಅನುಮಾನದ ಮೇರೆಗೆ ತುಂಗಾ ನದಿ (tunga river) ಯಲ್ಲಿ ಶೋಧ ಕಾರ್ಯ (search operation) ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →