shimoga | ಶಿವಮೊಗ್ಗ ವಿಮಾನ ನಿಲ್ದಾಣ : ಕೇಂದ್ರ ಸಚಿವರಿಗೆ ಸಂಸದ ಬಿ.ವೈ.ರಾಘವೇಂದ್ರ ಸಲ್ಲಿಸಿದ ಮನವಿಯೇನು?

MP B. Y. Raghavendra appeals to Union Petroleum Minister for establishment of fuel farm at Shimoga airport ಶಿವಮೊಗ್ಗ ವಿಮಾನ ನಿಲ್ದಾಣ ಇಂಧನ ಫಾರ್ಮ್ ಸ್ಥಾಪನೆಗೆ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

ಶಿವಮೊಗ್ಗ (shivamogga), ಸೆ. 5: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂಧನ ಫಾರ್ಮ್ (airport fuel farm) ಸ್ಥಾಪನೆ ಮಾಡಲು ಕ್ರಮಕೈಗೊಳ್ಳುವಂತೆ, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಸೆ. 5 ರ ಗುರುವಾರ ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇವಂದ್ರ ಮನವಿ ಪತ್ರ ಅರ್ಪಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ (shimoga airport) ದಲ್ಲಿ ಇಂಧನ ಫಾರ್ಮ್ ಸ್ಥಾಪನೆಯಲ್ಲಿ ಸಾಕಷ್ಟು ವಿಳಂಬವಾಗುತ್ತಿದೆ. ಇಂಧನ ಫಾರ್ಮ್ ಸ್ಥಾಪನೆಯಾದರೆ, ವಿಮಾನಯಾನ ಸಂಸ್ಥೆಗಳಿಗೆ ವಿಮಾನಗಳ ಇಂಧನ (aeroplane fuel) ಭರ್ತಿಗೆ ತಗಲುವ ಕಾರ್ಯಾಚರಣೆಯ ವೆಚ್ಚ ಕಡಿಮೆಯಾಗಲಿದೆ. ಇದರಿಂದ ಪ್ರಯಾಣಿಕರ ಪ್ರಯಾಣ ವೆಚ್ಚದಲ್ಲಿಯೂ ಇಳಿಕೆಯಾಗಲಿದೆ.

ಈಗಾಗಲೇ ಶಿವಮೊಗ್ಗ ವಿಮಾನ ನಿಲ್ದಾಣ (airport) ನಿರ್ವಹಣೆ ಮಾಡುತ್ತಿರುವ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮವು (kssidcl), ಐಓಸಿಎಲ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇಂಧನ ಫಾರ್ಮ್ (fuel farm) ಮಂಜೂರು ಮಾಡುವಂತೆ ಕೋರಿ ಸಲ್ಲಿಸಿರುವ ಪ್ರಸ್ತಾವನೆಯು, ಐಓಸಿಎಲ್ ಅಧ್ಯಕ್ಷರ ಬಳಿ ಅನುಮತಿಗೆ ಬಾಕಿಯಿದೆ. ಶೀಘ್ರಗತಿಯಲ್ಲಿ ಅನುಮತಿ ದೊರಕಿಸಿಕೊಡಬೇಕು ಎಂದು ಸಂಸದರು ಸಚಿವರಿಗೆ ಮನವಿ ಮಾಡಿದ್ದಾರೆ.

ಸಂಸದರ ಮನವಿ ಆಲಿಸಿದ ಕೇಂದ್ರ ಸಚಿವರು, ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಮಾತನಾಡಿ ಕಾಲಮಿತಿಯೊಳಗೆ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

ಅನುಕೂಲ : ಶಿವಮೊಗ್ಗ ವಿಮಾನ ನಿಲ್ದಾಣ (shimoga airport ) ದಲ್ಲಿ ಇಂಧನ ಫಾರ್ಮ್ ಆರಂಭವಾದರೆ, ವಿಮಾನಗಳಿಗೆ ಅಗತ್ಯ ಇಂಧನ ಲಭ್ಯತೆ ಸುಲಭವಾಗಲಿದೆ. ಇದರಿಂದ ಪ್ರಯಾಣದ ವೆಚ್ಚ ಕೂಡ ಕಡಿಮೆಯಾಗಲಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ (mp b y raghavendra) ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →