muddebihal news | ಮುದ್ದೇಬಿಹಾಳ | ಬೈಕ್ ವ್ಹೀಲಿಂಗ್ : ಮೂವರು ಯುವಕರು ಸಾವು – ಹಲವರಿಗೆ ಗಂಭೀರ ಗಾಯ!

Shivamogga : Car Collision – Two Workers on Bike Killed! ಶಿವಮೊಗ್ಗ : ಕಾರು ಡಿಕ್ಕಿ – ಬೈಕ್ ನಲ್ಲಿದ್ದ ಇಬ್ಬರು ಕಾರ್ಮಿಕರು ಸಾವು!

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ), ಸೆ. 6 : ರಸ್ತೆ ದಾಟುತ್ತಿದ್ದವರಿಗೆ ಬೈಕ್ ಡಿಕ್ಕಿ (bike accident) ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮುದ್ದೇಬಿಹಾಳ ತಾಲೂಕಿನ (muddebihal taluk) ಕುಂಟೋಜಿ ಗ್ರಾಮದ ಹೊರವಲಯ ಪಿಕೆಪಿಎಸ್ ಬಳಿ ಸೆ. 5 ರಾತ್ರಿ ನಡೆದಿದೆ.

ನಿಂಗರಾಜ ಚೌಧರಿ (22), ಅನಿಲ ವನೂರು (27) ಹಾಗೂ ಕುಮಾರ ಪ್ಯಾಟಿ (18) ಮೃತಪಟ್ಟವರೆಂದು ಗುರುತಿಸಲಾಗಿದೆ.

ಮೃತರಲ್ಲಿ ಬೈಕ್ (bike) ನಲ್ಲಿದ್ದ ಇಬ್ಬರು ಹಾಗೂ ಓರ್ವರು ಪಾದಚಾರಿ (Pedestrian) ಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯುತ್ತಿದ್ದು, ವಿವಿಧ ಕಾರ್ಯಕ್ರಮಗಳು ಆಯೋಜನೆಯಾಗಿವೆ. ಇವುಗಳನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಆಗಮಿಸಿದ್ದರು.

ಬೈಕ್ ವ್ಹೀಲಿಂಗ್ (bike wheeling) ಮಾಡಿಕೊಂಡು ಬಂದವರು, ಚಾಲನೆಯ ನಿಯಂತ್ರಣ ಕಳೆದುಕೊಂಡು ರಸ್ತೆ ದಾಟುತ್ತಿದ್ದವರಿಗೆ ಡಿಕ್ಕಿ (accident) ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಅವಘಡದಲ್ಲಿ ಗಾಯಗೊಂಡಿರುವ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →