kundapura news | ಕುಂದಾಪುರದ ಲಾಡ್ಜ್ ನಲ್ಲಿ ಶಿವಮೊಗ್ಗ ಮೂಲದ ಸರ್ಕಾರಿ ನೌಕರನ ಸಾವು!

kundapura news | The death of a Shimoga-based government employee in a lodge in Kundapura! ಕುಂದಾಪುರದ ಲಾಡ್ಜ್ ನಲ್ಲಿ ಶಿವಮೊಗ್ಗ ಮೂಲದ ಸರ್ಕಾರಿ ನೌಕರನ ಸಾವು!

ಶಿವಮೊಗ್ಗ (shivamogga), ಸೆ. 9: ಶಿವಮೊಗ್ಗ ನಗರದ ಗಾಡಿಕೊಪ್ಪದ ನಿವಾಸಿಯಾದ, ಉಡುಪಿ ಜಿಲ್ಲೆಯ ಆರೋಗ್ಯ ಇಲಾಖೆ (health dept) ಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ನೌಕರನೋರ್ವ, ಕುಂದಾಪುರ (kundapura) ದ ಲಾಡ್ಜ್ ವೊಂದರಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಪ್ರಶಾಂತ್ (37) ಮೃತಪಟ್ಟ ನೌಕರ ಎಂದು ಗುರುತಿಸಲಾಗಿದೆ. ಕುಂದಾಪುರ ತಾಲೂಕಿ (kundapura taluk) ನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.

ಇತ್ತೀಚೆಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ (primary health centre) ಕ್ಕೆ ವರ್ಗಾವಣೆಯಾಗಿದ್ದರು ಎಂದು ತಿಳಿದುಬಂದಿದೆ. ಸೆ. 5 ರಂದು ಕುಂದಾಪುರದ ಲಾಡ್ಜ್ (kundapura lodge) ವೊಂದರಲ್ಲಿ ರೂಂ ಬುಕ್ ಮಾಡಿಕೊಂಡು ತಂಗಿದ್ದರು.

ಲಾಡ್ಜ್ ನ ಕೊಠಡಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿಯೇ ಅವರು ಮೃತಪಟ್ಟಿದ್ದಾರೆ. ಸಾವಿಗೆ ಇನ್ನಷ್ಟೆ ಸ್ಪಷ್ಟ ಕಾರಣಗಳು ತಿಳಿದುಬರಬೇಕಾಗಿದೆ.

ಮೃತ ದೇಹವನ್ನು ಸೆ. 6 ರಂದು ಶಿವಮೊಗ್ಗದ ಗಾಡಿಕೊಪ್ಪ (shimoga gadikoppa) ದ ನಿವಾಸಕ್ಕೆ ತರಲಾಗುತ್ತಿದೆ. ಸಂಜೆ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →