ಶಿವಮೊಗ್ಗ (shivamogga), ಸೆ. 17: ಶಿವಮೊಗ್ಗ ತಾಲೂಕಿನ ಆಯನೂರು (ayanuru) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಸೆ. 20 ರಂದು ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸದರಿ ಕೇಂದ್ರದ ವ್ಯಾಪ್ತಿಯಲ್ಲಿನ ಈ ಕೆಳಕಂಡ ಗ್ರಾಮಗಳಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ (power outage) ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಯನೂರು, ಮಂಡಘಟ್ಟ (mandaghatta), ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ನಾಗರಬಾವಿ, ಮೈಸವಳ್ಳಿ, ವೀರಣ್ಣನಬೆನವಳ್ಳಿ,
ಸೇವಾಲಾಲನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ (power cut) ವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

