Caste abuse, assault case : Bhadravati man sentenced to 4 years rigorous imprisonment! ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!

court judgement news | ಬೆಳಗಾವಿ : 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ!

ಬೆಳಗಾವಿ (belagavi), ಸೆ. 28: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ವ್ಯಕ್ತಿಯೋರ್ವನಿಗೆ, ಮರಣ ದಂಡನೆ ಶಿಕ್ಷೆ ವಿಧಿಸಿ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಎಫ್‌ಟಿಎಸ್‌ಸಿ-1) ನ್ಯಾಯಾಲಯ ಸೆ. 27 ರಂದು ತೀರ್ಪು ನೀಡಿದೆ.

ಬೆಳಗಾವಿ ಜಿಲ್ಲೆ  ರಾಯಭಾಗ ತಾಲೂಕಿನ ಗ್ರಾಮವೊಂದರ 39 ವರ್ಷದ ವ್ಯಕ್ತಿಯೇ ಗಲ್ಲು ಶಿಕ್ಷೆಗೆ ಗುರಿಯಾದನು (ಪೋಕ್ಸೋ ಕಾಯ್ದೆಯಡಿ ವ್ಯಕ್ತಿಯ ಯಾವುದೇ ವಿವರ ಬಹಿರಂಗಪಡಿಸುವಂತಿಲ್ಲ).

ಮರಣ ದಂಡನೆ ಶಿಕ್ಷೆಯ ಜೊತೆಗೆ 45 ಸಾವಿರ ರೂ. ದಂಡ ಕೂಡ ವಿಧಿಸಲಾಗಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೊಲೆ ಮಾಡಿದ್ದ ಕಾಮುಕ : 21/09/2017 ರಂದು ಮನೆಯ  ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿಯನ್ನು ಅಪಹರಣ ಮಾಡಲಾಗಿತ್ತು. ಬಾಲಕಿಯ ಶವವು ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನಂತರ ಕೊಲೆ ಮಾಡಿ, ಮೈಮೇಲೆ ಮಣ್ಣು ಮುಚ್ಚಿದ್ದು ಕಂಡುಬಂದಿತ್ತು. ಈ ಘಟನೆಯು ಬೆಳಗಾವಿ ಜಿಲ್ಲೆಯನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಈ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಸ್ತುತ ಶಿಕ್ಷೆಗೊಳಗಾದ ವ್ಯಕ್ತಿಯನ್ನು ಬಂಧಿಸಿದ್ದರು. ನಂತರ ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.  

Belagavi : A person who raped and murdered a three-year-old girl was sentenced to death by the Belgaum Additional District and Sessions Court (FTSC-1) Judgment was given on sep – 27th.

Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ? Previous post shimoga power cut news | ಶಿವಮೊಗ್ಗ : ಸೆ. 29 ರಂದು 50 ಕ್ಕೂ ಅಧಿಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!
Tunnel road at Agumbe Ghat : What did MP B.Y. Raghavendra say? ಆಗುಂಬೆ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣ : ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು? Next post tunnel road at agumbe ghat | ಆಗುಂಬೆ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣ : ಬಿ.ವೈ.ರಾಘವೇಂದ್ರ ಹೇಳಿದ್ದೇನು?