bhadravati news | ಭದ್ರಾವತಿ VISL ಕಾರ್ಖಾನೆಯಲ್ಲಿ ಕಳವು ಮಾಡಿದ್ದವರು ಯಾರು?
ಭದ್ರಾವತಿ (bhadravati), ಅ. 5: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯಲ್ಲಿ ನಡೆದಿದ್ದ ತಾಮ್ರದ ವೈಂಡಿಂಗ್ ವೈರ್ ಕಳ್ಳತನಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಭದ್ರಾವತಿ ನ್ಯೂ ಟೌನ್ ಠಾಣೆ (new town police station) ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಭದ್ರಾವತಿಯ ಹೊಸ ಕೋಡಿಹಳ್ಳಿ ಗ್ರಾಮ ದೇವರನರಸೀಪುರದ ನಿವಾಸಿ ವೆಂಕಟೇಶ ಯಾನೆ ಬುಡ್ಡಾ (29) ಹಾಗೂ ಎಕ್ಸಿನಾ ಕಾಲೋನಿ ನಿವಾಸಿ ಮುನೀರ್ ಜಾನ್ ಯಾನೆ ತಿಕಲ (36) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಧಿತರಿಂದ 36,500 ರೂ. ಮೌಲ್ಯದ 37 ಕೆಜಿ ತೂಕದ ತಾಮ್ರದ ತಂತಿ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ಪ್ಯಾಸೆಂಜರ್ ಆಟೋವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿವೈಎಸ್ಪಿ ನಾಗರಾಜ್, ನಗರ ವೃತ್ತದ ಸರ್ಕಲ್ ಇನ್ಸ್’ಪೆಕ್ಟರ್ ಶ್ರೀಶೈಲಕುಮಾರ್ ಮೇಲ್ವಿಚಾರಣೆಯಲ್ಲಿ ನ್ಯೂ ಟೌನ್ ಠಾಣೆ ಸಬ್ ಇನ್ಸ್’ಪೆಕ್ಟರ್ ರಮೇಶ್ ಟಿ ಪಿ, ಎಎಸ್ಐ ಮಂಜಪ್ಪ, ಸಿಬ್ಬಂದಿಗಳಾದ ಸಿ ಹೆಚ್ ಸಿ ನವೀನ್, ಸಿಪಿಸಿ ಪ್ರಸನ್ನರವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ.
ಕಳವು : 08-09-2024 ರಂದು ರಾತ್ರಿ ವಿಐಎಸ್ಎಲ್ ಕಾರ್ಖಾನೆಯ ಸೆಂಟ್ರಲ್ ಎಲೆಕ್ಟ್ರಿಕಲ್ ವರ್ಕ ಶಾಪ್ ರಿಪೇರಿ ಮಾಡಲು ತಂದಿದ್ದ, ವೆಲ್ಡಿಂಗ್ ಮಷಿನ್ ನಲ್ಲಿದ್ದ 35,000 ರೂ. ಬೆಲೆ ಬಾಳುವ 50 ಕೆ ಜಿ ತೂಕದ ತಾಮ್ರದ ವೈಂಡಿಂಗ್ ಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಕಾರ್ಖಾನೆಯ ಸೆಕ್ಯುರಿಟಿ ಗಾರ್ಡ್ ಅವರು ಪೊಲೀಸರಿಗೆ ದೂರು ನೀಡಿದ್ದರು.
In connection with the theft of copper winding wire in Bhadravati VISL factory, New Town police have arrested two accused.
More Stories
bhadravati news | ಭದ್ರಾವತಿಯಲ್ಲಿ ಅಸ್ಸಾಂ ರಾಜ್ಯದ ಮಹಿಳೆಯ ನಿಗೂಢ ಕಣ್ಮರೆ!
The mysterious disappearance of a woman from Bhadravati!
ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!
bhadravati news | ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
Bhadravati: A love dispute that turned into a disaster – ended in the murder of two people!
ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
job news | ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Job Information | Applications invited for the posts of Anganwadi workers and helpers in Shivamogga and Bhadravati taluks
ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
