dangerous highway for students : CM office notice to Shimoga Corporation Commissioner SP for appropriate action ವಿದ್ಯಾರ್ಥಿಗಳ ಪಾಲಿಗೆ ಗಂಡಾಂತರಕಾರಿಯಾದ ಹೆದ್ಧಾರಿ : ಸೂಕ್ತ ಕ್ರಮಕ್ಕೆ ಶಿವಮೊಗ್ಗ ಪಾಲಿಕೆ ಆಯುಕ್ತರು, ಎಸ್ಪಿಗೆ ಸಿಎಂ ಕಚೇರಿ ಸೂಚನೆ

ಶಿವಮೊಗ್ಗ – ವಿದ್ಯಾರ್ಥಿಗಳ ಪಾಲಿಗೆ ಗಂಡಾಂತರಕಾರಿಯಾದ ಹೆದ್ಧಾರಿ : ಸಿಎಂ ಕಚೇರಿ ಸೂಚನೆಯೇನು?

ಶಿವಮೊಗ್ಗ (shivamogga), ಡಿ. 11: ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ವ್ಯಾಪ್ತಿ ಗಾಡಿಕೊಪ್ಪದ ಸರ್ಕಾರಿ ಶಾಲೆಗೆ ಹೊಂದಿಕೊಂಡಂತಿರುವ ರಾಷ್ಟ್ರೀಯ ಹೆದ್ಧಾರಿಯು ಶಾಲಾ ಮಕ್ಕಳ ಪಾಲಿಗೆ ಗಂಡಾಂತರಕಾರಿಯಾಗಿ ಪರಿಣಮಿಸಿರುವ ದೂರಿನ ಕುರಿತಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯರ ಕಚೇರಿ ಸ್ಪಂದಿಸಿದೆ.

ಮಕ್ಕಳು ಸುರಕ್ಷಿತವಾಗಿ ಹೆದ್ಧಾರಿ ದಾಟಿಕೊಂಡು ಶಾಲೆ – ಮನೆಗೆ ಓಡಾಡಲು ಅಗತ್ಯ, ತ್ವರಿತ ಕ್ರಮಕೈಗೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗವು ಸೂಚನೆ ನೀಡಿದೆ.

ಗಾಡಿಕೊಪ್ಪದ ಸರ್ಕಾರಿ ಶಾಲೆ ಮಕ್ಕಳಿಗೆ ರಾಷ್ಟ್ರೀಯ ಹೆದ್ಧಾರಿ ಅಪಾಯಕಾರಿಯಾಗಿ ಪರಿಣಮಿಸಿರುವ ಕುರಿತಂತೆ, ಪತ್ರಕರ್ತ ಬಿ. ರೇಣುಕೇಶ್ ಅವರು ವರದಿ ಮಾಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ, ಸಿಎಂ ಕಚೇರಿ ಕುಂದುಕೊರತೆ ವಿಭಾಗದ ಗಮನಕ್ಕೆ ತಂದಿದ್ದರು.

ಇದನ್ನು ಗಮನಿಸಿದ ಸಿಎಂ ಕಚೇರಿಯು, ಕಾಲಮಿತಿಯೊಳಗೆ ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಶಿವಮೊಗ್ಗ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮೌಖಿಕ ಸೂಚಿಸಿತ್ತು. ಈ ಕುರಿತಂತೆ ಸಿಎಂ ಕಚೇರಿಗೆ ಪಾಲಿಕೆ ಆಯುಕ್ತರು ಪತ್ರ ಕೂಡ ಬರೆದಿದ್ದಾರೆ.

ಮೆಚ್ಚುಗೆ : ‘ಸರ್ಕಾರಿ ಶಾಲೆಗೆ ಹೊಂದಿಕೊಂಡಂತಿರುವ ಸರ್ಕಲ್ ನಲ್ಲಿ, ಶಾಲಾ ಮಕ್ಕಳ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಮನವಿ ಮಾಡಿಕೊಂಡು ಬರಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.

ಇದೀಗ ಸಿಎಂ ಕಚೇರಿ ಕುಂದುಕೊರತೆ ವಿಭಾಗವು ಮಕ್ಕಳ ಸುರಕ್ಷಿತ ಸಂಚಾರಕ್ಕೆ ಆದ್ಯ ಗಮನಹರಿಸುವಂತೆ ಸೂಚನೆ ನೀಡಿರುವುದು ನಿಜಕ್ಕೂ ಅಭಿನಂದನೀಯ ಸಂಗತಿಯಾಗಿದೆ’ ಎಂದು ಸ್ಥಳೀಯ ನಿವಾಸಿ ಬಸವರಾಜ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

*** ‘ಗಾಡಿಕೊಪ್ಪದ ಸರ್ಕಾರಿ ಶಾಲೆ ಸಮೀಪದ ರಾಷ್ಟ್ರೀಯ ಹೆದ್ಧಾರಿ ಸರ್ಕಲ್ ನಲ್ಲಿ ಸಿಗ್ನಲ್ ಲೈಟ್ ಅಳವಡಿಕೆ ಕುರಿತಂತೆ ಪೊಲೀಸ್ ಇಲಾಖೆಯೊಂದಿಗೆ ಸಮಾಲೊಚನೆ ನಡೆಸಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಎನ್ಓಸಿ ಪಡೆದು ಅಗತ್ಯ ಕ್ರಮಕೈಗೊಳ್ಳಲಾಗುವುದು. ಶಾಲಾ ಮಕ್ಕಳ ಸುರಕ್ಷಿತ ಸಂಚಾರಕ್ಕೆ ಪಾಲಿಕೆ ಆಡಳಿತದಿಂದಾಗುವ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುವುದು’ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಅವರು ಮಂಗಳವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದ್ದಾರೆ.

Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ! Previous post shimoga | ಶಿವಮೊಗ್ಗ : ಡಿ. 12 ರಂದು ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ?
Recruitment of PDO posts for comprehensive investigation : Action based on three-member committee report - CM ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ : ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ - ಸಿಎಂRecruitment of PDO posts for comprehensive investigation : Action based on three-member committee report - CM ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ : ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ - ಸಿಎಂ Next post ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆ : ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ – ಸಿಎಂ