shiralkoppa | To the attention of the citizens of Shiralakoppa municipality : Notice to apply for A and B khata! shiralkoppa | ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯ ನಾಗರಿಕರ ಗಮನಕ್ಕೆ : ಎ ಮತ್ತು ಬಿ ಖಾತಾಕ್ಕೆ ಅರ್ಜಿ ಸಲ್ಲಿಸಲು ಸೂಚನೆ!
ಶಿವಮೊಗ್ಗ | ಯುವಕ – ಯುವತಿಗೆ ಬೆದರಿಸಿ ಸುಲಿಗೆ ಪ್ರಕರಣ : ಆಟೋ ಚಾಲಕ ಸೇರಿದಂತೆ ಮೂವರು ಆರೋಪಿಗಳ ಬಂಧನ! ಶಿವಮೊಗ್ಗ, ಫೆ 19: ಯುವಕ, ಯುವತಿಗೆ ಬೆದರಿಸಿ ಹಣ ಸುಲಿಗೆ ಮಾಡಿದ್ದ ಆರೋಪದ ಮೇರೆಗೆ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಓರ್ವ ಆಟೋ ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಫೆ 18 ರಂದು ನಡೆದಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯ ನಿವಾಸಿ ಆಟೋ ಚಾಲಕ ಇಲಿಯಾಸ್ ಯಾನೆ ಇಲ್ಲು (26), ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕು ಚೀಲೂರು ನಿವಾಸಿ, ಹೂವಿನ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ಮೊಹಮದ್ ವಾಸೀಂ (28) ಹಾಗೂ ಶಿವಮೊಗ್ಗದ ಅಣ್ಣಾನಗರದ ನಿವಾಸಿ ಚಾಲಕ ವೃತ್ತಿಯ ಚಂದ್ರಶೇಖರ್ (30) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಘಟನೆ ಹಿನ್ನೆಲೆ : ಶಿವಮೊಗ್ಗ ತಾಲೂಕಿನ ಗಾಜನೂರಿನ ಹೋಟೆಲ್ ವೊಂದಕ್ಕೆ ಭದ್ರಾವತಿಯ ದಡಮಘಟ್ಟದ ಯುವಕನೋರ್ವ ಪರಿಚಯಸ್ಥ ಯುವತಿಯೊಂದಿಗೆ ಆಗಮಿಸಿದ್ದ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವೇಳೆ, ಅದೇ ಹೋಟೆಲ್ ನಲ್ಲಿದ್ದ ಮೂವರು ಆರೋಪಿಗಳು ತಮ್ಮ ಮೊಬೈಲ್ ಪೋನ್ ನಲ್ಲಿ ವೀಡಿಯೋ ಮಾಡಿಕೊಂಡಿದ್ದರು. ಸದರಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿದ್ದರು. ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ನಂತರ ಆಟೋದಲ್ಲಿ ಯುವಕ – ಯವತಿಯನ್ನು ಶಿವಮೊಗಗ ನಗರದತ್ತ ಕರೆತಂದಿದ್ದರು. 1.50 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದರು. ಈ ವೇಳೆ ಯುವತಿಯ ಪರ್ಸ್ ನಲ್ಲಿದ್ದ 24,500 ರೂ. ಹಾಗೂ ಯುವಕನ ಬಳಿಯಿದ್ದ 1500 ರೂ. ಕಿತ್ತುಕೊಂಡಿದ್ದರು. 1.50 ಲಕ್ಷ ರೂ. ನೀಡುವಂತೆ ಹೇಳಿ ಬೆದರಿಸಿ ಕಳುಹಿಸಿದ್ದರು. ನಂತರ ಯುವಕನು 7 ಸಾವಿರ ರೂ. ಹಣದೊಂದಿಗೆ ಆರೋಪಿ ಇಲಿಯಾಸ್ ಭೇಟಿಯಾಗಿದ್ದ.. ಆರೋಪಿಯು ಹೆಚ್ಚಿನ ಹಣಕ್ಕೆ ಡಿಮ್ಯಾಂಡ್ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ಸಂಬಂಧ ಯುವಕನು ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
Shikaripura: A farmer tried to poison himself at the protest site! shikaripur | ಶಿಕಾರಿಪುರ : ಪ್ರತಿಭಟನಾ ಸ್ಥಳದಲ್ಲಿಯೇ ವಿಷಪ್ರಾಶನಕ್ಕೆ ಮುಂದಾದ ರೈತ!
Shikaripur | Shiralakoppa police operation: The accused of Soraba who cheated a Hassan man by giving fake gold was arrested! Shikaripur | ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ : ನಕಲಿ ಬಂಗಾರ ನೀಡಿ ಹಾಸನ ವ್ಯಕ್ತಿಗೆ ವಂಚಿಸಿದ್ದ ಸೊರಬದ ಆರೋಪಿ ಸೆರೆ!
shikaripur | Shikaripura PLD Bank Election: After 25 years, Congress in control! shikaripur | ಶಿಕಾರಿಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ : 25 ವರ್ಷಗಳ ನಂತರ ಕಾಂಗ್ರೆಸ್ ವಶಕ್ಕೆ!
shikaripura | ಶಿಕಾರಿಪುರ : ಮನೆಯಲ್ಲಿ ಕಳವು ನಡೆಸಿದ್ದ ಆರೋಪಿ ಸೆರೆ – ಚಿನ್ನಾಭರಣ ವಶ! Shikaripura | Shikaripura: Accused of stealing at home arrested - gold jewelery seized!
Shikaripura: Protest demanding the development of huccharaya swamy temple ಶಿಕಾರಿಪುರ : ಹುಚ್ಚರಾಯ ಸ್ವಾಮಿ ದೇವಾಲಯ ಅಭಿವೃದ್ದಿಗೆ ಆಗ್ರಹಿಸಿ ಪ್ರತಿಭಟನೆ
Shivamogga: Hindu Mahasabha Ganapati Procession on the way with great decoration! ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಮಾರ್ಗದಲ್ಲಿ ಭರ್ಜರಿ ಅಲಂಕಾರ!
A one-and-a-half-year-old child died after swallowing a juice bottle cap! ಜ್ಯೂಸ್ ಬಾಟಲಿ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗುವಿನ ದಾರುಣ ಸಾವು!